ಮೈಸೂರು: ‘ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕಲ್ವಾ? ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಕಲ್ವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಲ್ವಾ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕ್ಕೊಳ್ಲಿ ಬಿಡಿ. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ?’ ಎಂದರು.
‘ರಾಜ್ಯದಲ್ಲಿ ಹಿಜಾಬ್ ವಿವಾದ ಹುಟ್ಟುಹಾಕಿದ್ದೇ ಬಿಜೆಪಿಯವರು. ಎರಡೂ ಧರ್ಮದವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು. ಆದರೆ ಉದ್ದೇಶಪೂರ್ವಕವಾಗಿ ದೊಡ್ಡದಾಗಿಸಿದ್ದಾರೆ’ ಎಂದು ದೂರಿದರು.
ಅಮಾನವೀಯ: ‘ಜಾತ್ರೆಗಳಲ್ಲಿ ಯಾರು ಬೇಕಾದರೂ ವ್ಯಾಪಾರ ಮಾಡಬಹುದು. ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ಹೇರುತ್ತಿರುವುದು ಅಮಾನವೀಯ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮುಸ್ಲಿಂ ವರ್ತಕರನ್ನು ಬಹಿಷ್ಕರಿಸುವಂತೆ ಬಿಜೆಪಿಯವರೇ ವಿವಿಧ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…