Featured

ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠದಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ: ರಾಮದಾಸ್ ಅಠಾವಳೆ -Vishwanews24

ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠದಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ: ರಾಮದಾಸ್ ಅಠಾವಳೆ -Vishwanews24

ಬೆಂಗಳೂರು: ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಉತ್ತರ ಪ್ರದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕರಡು ವಿದೇಯಕ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಮರ ಜನಸಂಖ್ಯೆ ದಿಢೀರ್ ಹೆಚ್ಚಾಗಿದೆ. ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠ ಇದೆ. ಹೀಗಾಗಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಮುಸ್ಲಿಮರಲ್ಲಿ ಜನಸಂಖ್ಯೆ ಹೆಚ್ಚಳ ತಗ್ಗಿಸಲು ಈ ನಿಯಮ ತರಲಾಗುತ್ತಿದೆ ಎಂದು ಅಠವಾಳೆ ಹೇಳಿದ್ದಾರೆ.

ಮೀಸಲಾತಿಯ ಪ್ರಮಾಣ ಶೇಕಡ 50 ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಹೆಚ್ಚಿಸಲೇಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ’ ಎಂದರು.

ಮೀಸಲಾತಿ ಪ್ರಮಾಣ ಹೆಚ್ಚಿಸಲು ಸಂವಿಧಾನದ ತಿದ್ದುಪಡಿ ಆಗಬೇಕಿದೆ. ಸಂವಿಧಾನದ 102ನೇ ವಿಧಿಯ ಪ್ರಕಾರ, ರಾಜ್ಯಗಳಿಗೂ ಮೀಸಲಾತಿ ನೀಡುವ ಅಧಿಕಾರವಿದೆ. ಈ ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ‌ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ‌ ಮೀಸಲಾತಿಯನ್ನು ಆ ವರ್ಗದಲ್ಲಿರುವ ಆರ್ಥಿಕವಾಗಿ ಬಲಾಢ್ಯರಾದವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು. ‘ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕಿದೆ. ಅದರಿಂದ ಆಯಾ ಸಮುದಾಯಗಳ ಜನರಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ. ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ’ ಎಂದು ಅಠಾವಳೆ ಹೇಳಿದರು.

ಸದ್ಯ ದೇಶದಲ್ಲಿ ಸದ್ದು ಮಾಡುತ್ತಿರುವ ಜಾತಿಗಣತಿ ಕುರಿತು ಅಠಾವಳೆ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿಯಿಂದ ಕೋಮುವಾದ ಹೆಚ್ಚಾಗುವುದಿಲ್ಲ. ಜಾತಿ ಗಣತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ವಿಚಾರದಲ್ಲಿ ಅನಕೂಲ ಆಗಲಿದೆ. ಆಯಾ ಜಾತಿಯವರು ಪ್ರಮಾಣ ಎಷ್ಟಿದೆ ಎಂದು ತಿಳಿಯಲಿದೆ. ಇದರಿಂದ ಸೌಲಭ್ಯಗಳ ಹಂಚಿಕೆ ಸುಲಭವಾಗಲಿದೆ ಎಂದಿದ್ದಾರೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ, ದುರ್ಬಲರಿಗೆ ಅನಕೂಲಗಳು ಸಿಗಬೇಕು, ಉಳ್ಳವರಿಗಲ್ಲ ಎಂದು ಅಠಾವಳೆ ಹೇಳಿದ್ದಾರೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago