Featured

ಮುಸ್ಲಿಮರಿಗೆ ಇದ್ದ 2B ಮೀಸಲಾತಿ ರದ್ದುಪಡಿಸಿದ ರಾಜ್ಯ ಸರಕಾರ – Vishwanews24

ಹಿಂದುಳಿದ ವರ್ಗದ ಪಟ್ಟಿಯಲ್ಲಿ 2ಬಿ ಅಡಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಇದ್ದ ಶೇ.4ರಷ್ಟು ಮೀಸಲಾತಿ ರದ್ದು: ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ 2ಬಿ ಅಡಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮುಸ್ಲಿಮರಿಗೆ ಹಿಂದುಳಿದ ವರ್ಗದ ಪಟ್ಟಿಯಲ್ಲಿ 2 ಬಿ ಅಡಿಯಲ್ಲಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಈ ಮೀಸಲಾತಿ ಪ್ರಮಾಣವನ್ನು 2ಡಿ ವರ್ಗದಲ್ಲಿ ಬರುವ ವೀರಶೈವ ಲಿಂಗಾಯತರಿಗೆ ಶೇ.2ರಷ್ಟು ಹಾಗೂ 2ಸಿ ಅಡಿಯಲ್ಲಿರುವ ಒಕ್ಕಲಿಗ ಜನಾಂಗಗಕ್ಕೆ ಶೇ.2ರಷ್ಟು ಹಂಚಿಕೆ ಮಾಡಲಾಗಿದೆ. ಇದರಿಂದಾಗಿ ಹೊಸದಾಗಿ ಸೃಜಿಸಲಾದ ಪ್ರವರ್ಗ 2ಡಿ ಅಡಿಯಲ್ಲಿ ಲಿಂಗಾಯತರಿಗೆ ಶೇ.5 ರಿಂದ ಶೇ.7ಕ್ಕೆ ಹಾಗೂ 2ಸಿ ಅಡಿಯಲ್ಲಿ ಒಕ್ಕಲಿಗರಿಗೆ ಶೇ.4ರಿಂದ 6ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಅದೇ ರೀತಿ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ನೀಡುವ ಮೀಸಲಾತಿಯಲ್ಲಿ ಮುಸ್ಲಿಮರನ್ನು ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು.

ಹೊಸ ಲೆಕ್ಕಾಚಾರ ಪ್ರಕಾರ, ಒಕ್ಕಲಿಗ ಮೀಸಲಾತಿ ಪ್ರಮಾಣ ಶೇ.4ರಿಂದ 6ಕ್ಕೇರಲಿದೆ. ವೀರಶೈವ ಪಂಚಮಸಾಲಿ ಮೀಸಲಾತಿ ಪ್ರಮಾಣ 5ರಿಂದ 7 ಶೇಕಡಾಕ್ಕೇರಲಿದೆ. ಧಾರ್ಮಿಕ ಸಮುದಾಯದವರಿಗೆ ಹಿಂದುಳಿದ ವರ್ಗದ ಅಡಿಯಲ್ಲಿ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ 2 ಬಿ ಅನ್ನು ರದ್ದುಪಡಿಸಲಾಗಿದೆ. ಆದರೂ, ಅವರಿಗೆ ಅನ್ಯಾಯವಾಗಬಾರದು ಎಂದು ಇಡಬ್ಲ್ಯೂಎಸ್ ಕೋಟಾದ ಶೇಕಡ 10ರಷ್ಟು ಮೀಸಲಾತಿ ಗುಂಪಿಗೆ ಸೇರ್ಪಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇನ್ನು ಮುಂದೆ 2ಬಿ ಪ್ರವರ್ಗ ಇರುವುದಿಲ್ಲ. 2ಬಿ ಎಂದರೆ ಇದುವರೆಗೆ ಧಾರ್ಮಿಕ ಅಲ್ಪಸಂಖ್ಯಾತರಿಗೆ(ಮುಸ್ಲಿಮರು) ಇದ್ದ ಮೀಸಲಾತಿ. ಮುಂದೆ ಪ್ರವರ್ಗ 2 (ಅತ್ಯಂತ ಹೆಚ್ಚು ಹಿಂದುಳಿದವರು), 2ಎ (ಹಿಂದುಳಿದವರು), 2ಬಿ (ಅಲ್ಪಸಂಖ್ಯಾತರು) ಹಾಗೂ 3ಎ (ಒಕ್ಕಲಿಗ ಮತ್ತು ಇತರರು) ಮತ್ತು 3 ಬಿ (ವೀರಶೈವ ಪಂಚಮಸಾಲಿ ಮತ್ತು ಇತರರು) ಇತ್ತು. ಈಗ 2, 2ಎ, 2ಸಿ (ಒಕ್ಕಲಿಗ ಮತ್ತು ಇತರರು) ಮತ್ತು 2 ಡಿ (ವೀರಶೈವ ಪಂಚಮಸಾಲಿ ಮತ್ತು ಇತರರು) ಎಂಬ ಮೀಸಲಾತಿಗಳು ಇರಲಿವೆ ಎಂದು ಅವರು ವಿವರಿಸಿದರು.

ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. 2ಬಿ ಅಡಿ ಮೀಸಲಾತಿಯೂ ನೀಡಿಲ್ಲ. ಸ್ವಾತಂತ್ರ್ಯ ನಂತರ ಇಂತಹ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾಲ ಕಾಲಕ್ಕೆ ಹಲವು ನಿರ್ಣಯ ಕೈಗೊಂಡು ಹಲವು ಸಮಿತಿಗಳನ್ನು ರಚಿಸಲಾಗಿದೆ. ಆದರೆ ಸಮಿತಿಗಳ ಶಿಫಾರಸುಗಳನ್ನು ಜಾರಿ ಮಾಡಿರಲಿಲ್ಲ. ಇನ್ನೂ, ಹಿಂದುಳಿದ ವರ್ಗದಲ್ಲಿ ಒಂದೇ ವರ್ಗೀಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಅವರು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago