Featured

ಮುಸ್ಲಿಮರಿಗೆ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಧಾರವಾಡ: ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿರುವುದು ಸಂತಸ ತಂದಿದೆ. ಯಾವುದೇ ಸರ್ಕಾರ ಯಾವುದೇ ನಿರ್ಣಯ ತಂದಾಗ ಪ್ರಶ್ನೆ ಮಾಡುವ ಹಕ್ಕು ಇದೆ. ಆದರೆ ಅದು ಪ್ರಜಾಪ್ರಭುತ್ವದ ಮೂಲಕ ಆಗಬೇಕು. ದೇಶದ ಪರ ಇರೋರು ಮತ್ತು ದೇಶ ತುಂಡರಿಸಬೇಕು ಎನ್ನುವವರ ಮಧ್ಯೆ ಈಗ ಹೋರಾಟ ನಡೆಯುತ್ತದೆ. ಇದು ಎಡಪಂತಿ ಮತ್ತು ಬಲಪಂತಿ ಮಧ್ಯದ ಹೋರಾಟ ಅಲ್ಲ ಎಂದು ಹೇಳಿದರು.

ಪರಿಸ್ಥಿತಿ ಕೈ ಮೀರಿ ಹೋದ ಬಳಿಕ ಆಡಳಿತ ಪಕ್ಷ ಅರ್ಥ ಮಾಡಿಸುವ ಕೆಲಸ ಮಾಡುತ್ತಿದೆ. ದುರದೃಷ್ಟಕರ ಸಂಗತಿ ಅಂದರೆ ವಿರೋಧ ಪಕ್ಷಗಳ ಕೂಡ ರಾಷ್ಟ್ರೀಯ ಹಿತದ ದೃಷ್ಟಿಯ ನಿರ್ಣಯ ಬೆಂಬಲಿಸಬೇಕು. ನನ್ನ ವೋಟ್ ಬ್ಯಾಂಕ್, ನಾನು ಗೆಲ್ಲಬೇಕು ಎನ್ನುವ ದೃಷ್ಟಿಯಿಂದ ಪ್ರಚೋದನೆ ಕೊಡುವುದು ಸರಿಯಲ್ಲ. ಆದರೆ ಅದು ಆಗಿ ಹೋಗಿದೆ. ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆ ಚರ್ಚೆ ನೋಡಿದರೆ ಪ್ರಜ್ಞಾವಂತರಾದವರಿಗೆ ಸಿಎಎ ಬಗ್ಗೆ ಅರಿವಾಗುತ್ತಿತ್ತು. ಲೋಕಸಭೆ, ರಾಜ್ಯಸಭೆ ಟಿವಿ ವಿಶ್ಲೇಷಣೆ ಯಾರಿಗೆ ಅರ್ಥವಾಗಿಲ್ಲವೋ ಅವರಿಗೆ ತಿಳಿಸುವ ಪ್ರಯತ್ನ ಆಡಳಿತ ಪಕ್ಷ ಮಾಡಬೇಕಿತ್ತು. ಸದಯ ಈಗ ಮುಸ್ಲಿಮರ ಪ್ರತಿಭಟನೆಯ ಮೂಡ್ ಬದಲಾಗಿದೆ. ಈಗ ಶಾಂತಿಯುತವಾಗಿ ಪೋಲೀಸರಿಗೆ ಹೂವು ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಎಲ್ಲರ ಹಕ್ಕು ಆದರೆ ಪ್ರಜಾಪ್ರಭುತ್ವ ಧಿಕ್ಕರಿಸಿ ಪ್ರತಿಭಟನೆ ಮಾಡಬಾರದು. ಮಂಗಳೂರು ಗಲಭೆ ಮೊದಲು ನ್ಯಾಯಾಂಗ ತನಿಖೆ ಆಗಬೇಕಿತ್ತು. ಮೊದಲು ಗಲಭೆಯ ತನಿಖೆಯಾಗಲಿ. ಕೇರಳದಿಂದ ಎಷ್ಟು ಜನ ಬಂದಿದ್ದರು ಎನ್ನುವುದೆಲ್ಲ ತನಿಖೆಯಾಗಬೇಕು. ಗಲಭೆ ಹಿಂದೆ ಯಾರ ಯಾರ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಬೇಕು ಎಂದು ಅಗ್ರಹಿಸಿದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago