Featured

ಮುಸ್ಲಿಮರಿಗೆ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಧಾರವಾಡ: ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿರುವುದು ಸಂತಸ ತಂದಿದೆ. ಯಾವುದೇ ಸರ್ಕಾರ ಯಾವುದೇ ನಿರ್ಣಯ ತಂದಾಗ ಪ್ರಶ್ನೆ ಮಾಡುವ ಹಕ್ಕು ಇದೆ. ಆದರೆ ಅದು ಪ್ರಜಾಪ್ರಭುತ್ವದ ಮೂಲಕ ಆಗಬೇಕು. ದೇಶದ ಪರ ಇರೋರು ಮತ್ತು ದೇಶ ತುಂಡರಿಸಬೇಕು ಎನ್ನುವವರ ಮಧ್ಯೆ ಈಗ ಹೋರಾಟ ನಡೆಯುತ್ತದೆ. ಇದು ಎಡಪಂತಿ ಮತ್ತು ಬಲಪಂತಿ ಮಧ್ಯದ ಹೋರಾಟ ಅಲ್ಲ ಎಂದು ಹೇಳಿದರು.

ಪರಿಸ್ಥಿತಿ ಕೈ ಮೀರಿ ಹೋದ ಬಳಿಕ ಆಡಳಿತ ಪಕ್ಷ ಅರ್ಥ ಮಾಡಿಸುವ ಕೆಲಸ ಮಾಡುತ್ತಿದೆ. ದುರದೃಷ್ಟಕರ ಸಂಗತಿ ಅಂದರೆ ವಿರೋಧ ಪಕ್ಷಗಳ ಕೂಡ ರಾಷ್ಟ್ರೀಯ ಹಿತದ ದೃಷ್ಟಿಯ ನಿರ್ಣಯ ಬೆಂಬಲಿಸಬೇಕು. ನನ್ನ ವೋಟ್ ಬ್ಯಾಂಕ್, ನಾನು ಗೆಲ್ಲಬೇಕು ಎನ್ನುವ ದೃಷ್ಟಿಯಿಂದ ಪ್ರಚೋದನೆ ಕೊಡುವುದು ಸರಿಯಲ್ಲ. ಆದರೆ ಅದು ಆಗಿ ಹೋಗಿದೆ. ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆ ಚರ್ಚೆ ನೋಡಿದರೆ ಪ್ರಜ್ಞಾವಂತರಾದವರಿಗೆ ಸಿಎಎ ಬಗ್ಗೆ ಅರಿವಾಗುತ್ತಿತ್ತು. ಲೋಕಸಭೆ, ರಾಜ್ಯಸಭೆ ಟಿವಿ ವಿಶ್ಲೇಷಣೆ ಯಾರಿಗೆ ಅರ್ಥವಾಗಿಲ್ಲವೋ ಅವರಿಗೆ ತಿಳಿಸುವ ಪ್ರಯತ್ನ ಆಡಳಿತ ಪಕ್ಷ ಮಾಡಬೇಕಿತ್ತು. ಸದಯ ಈಗ ಮುಸ್ಲಿಮರ ಪ್ರತಿಭಟನೆಯ ಮೂಡ್ ಬದಲಾಗಿದೆ. ಈಗ ಶಾಂತಿಯುತವಾಗಿ ಪೋಲೀಸರಿಗೆ ಹೂವು ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಎಲ್ಲರ ಹಕ್ಕು ಆದರೆ ಪ್ರಜಾಪ್ರಭುತ್ವ ಧಿಕ್ಕರಿಸಿ ಪ್ರತಿಭಟನೆ ಮಾಡಬಾರದು. ಮಂಗಳೂರು ಗಲಭೆ ಮೊದಲು ನ್ಯಾಯಾಂಗ ತನಿಖೆ ಆಗಬೇಕಿತ್ತು. ಮೊದಲು ಗಲಭೆಯ ತನಿಖೆಯಾಗಲಿ. ಕೇರಳದಿಂದ ಎಷ್ಟು ಜನ ಬಂದಿದ್ದರು ಎನ್ನುವುದೆಲ್ಲ ತನಿಖೆಯಾಗಬೇಕು. ಗಲಭೆ ಹಿಂದೆ ಯಾರ ಯಾರ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಬೇಕು ಎಂದು ಅಗ್ರಹಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago