Featured

ಮುಸ್ಲಿಮರಿಗೆ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಧಾರವಾಡ: ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿರುವುದು ಸಂತಸ ತಂದಿದೆ. ಯಾವುದೇ ಸರ್ಕಾರ ಯಾವುದೇ ನಿರ್ಣಯ ತಂದಾಗ ಪ್ರಶ್ನೆ ಮಾಡುವ ಹಕ್ಕು ಇದೆ. ಆದರೆ ಅದು ಪ್ರಜಾಪ್ರಭುತ್ವದ ಮೂಲಕ ಆಗಬೇಕು. ದೇಶದ ಪರ ಇರೋರು ಮತ್ತು ದೇಶ ತುಂಡರಿಸಬೇಕು ಎನ್ನುವವರ ಮಧ್ಯೆ ಈಗ ಹೋರಾಟ ನಡೆಯುತ್ತದೆ. ಇದು ಎಡಪಂತಿ ಮತ್ತು ಬಲಪಂತಿ ಮಧ್ಯದ ಹೋರಾಟ ಅಲ್ಲ ಎಂದು ಹೇಳಿದರು.

ಪರಿಸ್ಥಿತಿ ಕೈ ಮೀರಿ ಹೋದ ಬಳಿಕ ಆಡಳಿತ ಪಕ್ಷ ಅರ್ಥ ಮಾಡಿಸುವ ಕೆಲಸ ಮಾಡುತ್ತಿದೆ. ದುರದೃಷ್ಟಕರ ಸಂಗತಿ ಅಂದರೆ ವಿರೋಧ ಪಕ್ಷಗಳ ಕೂಡ ರಾಷ್ಟ್ರೀಯ ಹಿತದ ದೃಷ್ಟಿಯ ನಿರ್ಣಯ ಬೆಂಬಲಿಸಬೇಕು. ನನ್ನ ವೋಟ್ ಬ್ಯಾಂಕ್, ನಾನು ಗೆಲ್ಲಬೇಕು ಎನ್ನುವ ದೃಷ್ಟಿಯಿಂದ ಪ್ರಚೋದನೆ ಕೊಡುವುದು ಸರಿಯಲ್ಲ. ಆದರೆ ಅದು ಆಗಿ ಹೋಗಿದೆ. ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆ ಚರ್ಚೆ ನೋಡಿದರೆ ಪ್ರಜ್ಞಾವಂತರಾದವರಿಗೆ ಸಿಎಎ ಬಗ್ಗೆ ಅರಿವಾಗುತ್ತಿತ್ತು. ಲೋಕಸಭೆ, ರಾಜ್ಯಸಭೆ ಟಿವಿ ವಿಶ್ಲೇಷಣೆ ಯಾರಿಗೆ ಅರ್ಥವಾಗಿಲ್ಲವೋ ಅವರಿಗೆ ತಿಳಿಸುವ ಪ್ರಯತ್ನ ಆಡಳಿತ ಪಕ್ಷ ಮಾಡಬೇಕಿತ್ತು. ಸದಯ ಈಗ ಮುಸ್ಲಿಮರ ಪ್ರತಿಭಟನೆಯ ಮೂಡ್ ಬದಲಾಗಿದೆ. ಈಗ ಶಾಂತಿಯುತವಾಗಿ ಪೋಲೀಸರಿಗೆ ಹೂವು ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಎಲ್ಲರ ಹಕ್ಕು ಆದರೆ ಪ್ರಜಾಪ್ರಭುತ್ವ ಧಿಕ್ಕರಿಸಿ ಪ್ರತಿಭಟನೆ ಮಾಡಬಾರದು. ಮಂಗಳೂರು ಗಲಭೆ ಮೊದಲು ನ್ಯಾಯಾಂಗ ತನಿಖೆ ಆಗಬೇಕಿತ್ತು. ಮೊದಲು ಗಲಭೆಯ ತನಿಖೆಯಾಗಲಿ. ಕೇರಳದಿಂದ ಎಷ್ಟು ಜನ ಬಂದಿದ್ದರು ಎನ್ನುವುದೆಲ್ಲ ತನಿಖೆಯಾಗಬೇಕು. ಗಲಭೆ ಹಿಂದೆ ಯಾರ ಯಾರ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಬೇಕು ಎಂದು ಅಗ್ರಹಿಸಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago