Featured

ಮುಸ್ಲಿಮರಿಗೆ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಧಾರವಾಡ: ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿರುವುದು ಸಂತಸ ತಂದಿದೆ. ಯಾವುದೇ ಸರ್ಕಾರ ಯಾವುದೇ ನಿರ್ಣಯ ತಂದಾಗ ಪ್ರಶ್ನೆ ಮಾಡುವ ಹಕ್ಕು ಇದೆ. ಆದರೆ ಅದು ಪ್ರಜಾಪ್ರಭುತ್ವದ ಮೂಲಕ ಆಗಬೇಕು. ದೇಶದ ಪರ ಇರೋರು ಮತ್ತು ದೇಶ ತುಂಡರಿಸಬೇಕು ಎನ್ನುವವರ ಮಧ್ಯೆ ಈಗ ಹೋರಾಟ ನಡೆಯುತ್ತದೆ. ಇದು ಎಡಪಂತಿ ಮತ್ತು ಬಲಪಂತಿ ಮಧ್ಯದ ಹೋರಾಟ ಅಲ್ಲ ಎಂದು ಹೇಳಿದರು.

ಪರಿಸ್ಥಿತಿ ಕೈ ಮೀರಿ ಹೋದ ಬಳಿಕ ಆಡಳಿತ ಪಕ್ಷ ಅರ್ಥ ಮಾಡಿಸುವ ಕೆಲಸ ಮಾಡುತ್ತಿದೆ. ದುರದೃಷ್ಟಕರ ಸಂಗತಿ ಅಂದರೆ ವಿರೋಧ ಪಕ್ಷಗಳ ಕೂಡ ರಾಷ್ಟ್ರೀಯ ಹಿತದ ದೃಷ್ಟಿಯ ನಿರ್ಣಯ ಬೆಂಬಲಿಸಬೇಕು. ನನ್ನ ವೋಟ್ ಬ್ಯಾಂಕ್, ನಾನು ಗೆಲ್ಲಬೇಕು ಎನ್ನುವ ದೃಷ್ಟಿಯಿಂದ ಪ್ರಚೋದನೆ ಕೊಡುವುದು ಸರಿಯಲ್ಲ. ಆದರೆ ಅದು ಆಗಿ ಹೋಗಿದೆ. ಮುಸ್ಲಿಮರಿಗೆ ಈಗ ತಾವು ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ ಆಗಿದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆ ಚರ್ಚೆ ನೋಡಿದರೆ ಪ್ರಜ್ಞಾವಂತರಾದವರಿಗೆ ಸಿಎಎ ಬಗ್ಗೆ ಅರಿವಾಗುತ್ತಿತ್ತು. ಲೋಕಸಭೆ, ರಾಜ್ಯಸಭೆ ಟಿವಿ ವಿಶ್ಲೇಷಣೆ ಯಾರಿಗೆ ಅರ್ಥವಾಗಿಲ್ಲವೋ ಅವರಿಗೆ ತಿಳಿಸುವ ಪ್ರಯತ್ನ ಆಡಳಿತ ಪಕ್ಷ ಮಾಡಬೇಕಿತ್ತು. ಸದಯ ಈಗ ಮುಸ್ಲಿಮರ ಪ್ರತಿಭಟನೆಯ ಮೂಡ್ ಬದಲಾಗಿದೆ. ಈಗ ಶಾಂತಿಯುತವಾಗಿ ಪೋಲೀಸರಿಗೆ ಹೂವು ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಎಲ್ಲರ ಹಕ್ಕು ಆದರೆ ಪ್ರಜಾಪ್ರಭುತ್ವ ಧಿಕ್ಕರಿಸಿ ಪ್ರತಿಭಟನೆ ಮಾಡಬಾರದು. ಮಂಗಳೂರು ಗಲಭೆ ಮೊದಲು ನ್ಯಾಯಾಂಗ ತನಿಖೆ ಆಗಬೇಕಿತ್ತು. ಮೊದಲು ಗಲಭೆಯ ತನಿಖೆಯಾಗಲಿ. ಕೇರಳದಿಂದ ಎಷ್ಟು ಜನ ಬಂದಿದ್ದರು ಎನ್ನುವುದೆಲ್ಲ ತನಿಖೆಯಾಗಬೇಕು. ಗಲಭೆ ಹಿಂದೆ ಯಾರ ಯಾರ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಬೇಕು ಎಂದು ಅಗ್ರಹಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago