ಅಹಮದಾಬಾದ್: “ವಿಶ್ವದ 150 ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಹೋಗಲು ಮುಸ್ಲಿಮರಿಗೆ ಅವಕಾಶವಿದೆ. ಆದರೆ ಹಿಂದೂಗಳಿಗಿರುವುದು ಭಾರತ ದೇಶ ಒಂದು ಮಾತ್ರ” ಎಂದು ಹೇಳುವ ಮೂಲಕ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಅಹಮದಾಬಾದ್ನ ಸಬರಮತಿ ಆಶ್ರಮದಲ್ಲಿ ನಡೆದ ರ್ಯಾಲಿಯಲ್ಲಿ ಅವರು ನೂತನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವಿಷಯದಲ್ಲಿ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಶಯಗಳನ್ನು ಕಾಂಗ್ರೆಸ್ ಗೌರವಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ದೇಶ ವಿಭಜನೆಗೊಂಡಾಗ ಪಾಕಿಸ್ತಾನದಲ್ಲಿ ಶೇ. 22 ರಷ್ಟು ಹಿಂದೂಗಳಿದ್ದರು. ಆದರೆ, ಈಗ ಅತ್ಯಾಚಾರ, ನಿರಂತರ ದೌರ್ಜನ್ಯದಿಂದ ಅಲ್ಲಿನ ಹಿಂದೂಗಳ ಸಂಖ್ಯೆ ಶೇ. 3 ರಷ್ಟಾಗಿದೆ. ಆದ್ದರಿಂದ ಹಿಂದೂಗಳು ಭಾರತಕ್ಕೆ ವಾಪಾಸ್ ಬರಬೇಕಾಗಿದೆ ಎಂದರು. ಈ ತೊಂದರೆಗೀಡಾದ ಹಿಂದೂಗಳಿಗೆ ಸಹಾಯ ಮಾಡಲು ಕಾಂಗ್ರೆಸ್ ಏನು ಮಾಡಬೇಕೋ ಅದನ್ನು ನಾವು ಮಾಡುತ್ತಿದ್ದೇವೆ. ಆದರೆ, ನೀವು ವಿರೋಧಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…