Featured

ಮುಸ್ಲಿಮರಿಲ್ಲದ ಗ್ರಾಮದಲ್ಲಿ ಪ್ರತಿದಿನ ನಮಾಝ್ ಮಾಡಿ ಮಸೀದಿಯನ್ನು ನಿರ್ವಹಿಸುತ್ತಿರುವ ಹಿಂದುಗಳು -Vishwanews24

ಪಾಟ್ನಾ, : ದೇಶದಲ್ಲಿ ಧರ್ಮಾಂಧತೆ ಹಾಗೂ ಕೋಮು ಗಲಭೆಯ ಘಟನೆಗಳು ಹೆಚ್ಚುತ್ತಿರುವ ನಡುವೆ ಬಿಹಾರದ ನಲಂದಾ ಜಿಲ್ಲೆಯ ಗ್ರಾಮವೊಂದು ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ನಲಂದಾ ಜಿಲ್ಲೆಯ ಮಾಧಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಇಲ್ಲಿನ 200 ವರ್ಷಗಳ ಹಳೆಯ ಮಸೀದಿಯೊಂದರಲ್ಲಿ ಹಿಂದೂಗಳು ಪ್ರತಿದಿನ ಐದು ಬಾರಿ ನಮಾಝ್ ಮಾಡುತ್ತಿದ್ದಾರೆ. ಅಲ್ಲದೆ, ಹಿಂದೂಗಳೇ ಮಸೀದಿಯನ್ನು ನಿರ್ವಹಿಸುತ್ತಿದ್ದಾರೆ.

”ನಮಗೆ (ಹಿಂದೂಗಳು) ಆಝಾನ್ ತಿಳಿದಿಲ್ಲ. ಆದರೆ, ಪೆನ್‌ಡ್ರೈವ್‌ನಲ್ಲಿ ರೆಕಾರ್ಡಿಂಗ್ ಮಾಡಿದ ಆಝಾನ್ ಅನ್ನು ಧ್ವನಿವರ್ಧಕದಲ್ಲಿ ನುಡಿಸಲಾಗುತ್ತದೆ” ಎಂದು ಗ್ರಾಮದ ನಿವಾಸಿ ಹನ್ಸ್ ಕುಮಾರ್ ಹೇಳಿದ್ದಾರೆ. ಮಾಧಿಯಲ್ಲಿ ಗಣನೀಯ ಸಂಖ್ಯೆಯ ಮುಸ್ಲಿಮರು ಇದ್ದರು. ಆದರೆ, ಅವರು ಕ್ರಮೇಣ ವಲಸೆ ಹೋದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

”ಮಸೀದಿ ನಿರ್ವಹಿಸಲು ಯಾರೊಬ್ಬರೂ ಇರಲಿಲ್ಲ. ಆದುದರಿಂದ ಹಿಂದೂಗಳು ಮುಂದೆ ಬಂದರು” ಎಂದು ಮಸೀದಿ ನಿರ್ವಹಿಸುತ್ತಿರುವ ಗೌತಮ್ ಹೇಳಿದ್ದಾರೆ. ಮಸೀದಿಯನ್ನು ಯಾವಾಗ ನಿರ್ಮಾಣ ಮಾಡಲಾಯಿತು ಹಾಗೂ ಯಾರು ನಿರ್ಮಾಣ ಮಾಡಿದರು ಎಂಬ ಬಗ್ಗೆ ಯಾರೊಬ್ಬರಿಗೂ ತಿಳಿದಿಲ್ಲ. ಆದರೆ, ಹಿಂದೂಗಳು ಯಾವುದೇ ಶುಭ ಸಮಾರಂಭದ ಮುನ್ನ ಮಸೀದಿಗೆ ಭೇಟಿ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

”ಮಸೀದಿಯನ್ನು ದಿನನಿತ್ಯ ಸ್ವಚ್ಚಗೊಳಿಸಲಾಗುತ್ತದೆ. ಅಲ್ಲದೆ, ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ತಮಗೆ ಸಮಸ್ಯೆ ಎದುರಾದಾಗ ಕೂಡ ಜನರು ಇಲ್ಲಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ” ಎಂದು ಗ್ರಾಮದ ಅರ್ಚಕ ಜಾಂಕಿ ಪಂಡಿತ್ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago