Featured

ಮುಸ್ಲಿಮರಿಲ್ಲದ ಗ್ರಾಮದಲ್ಲಿ ಪ್ರತಿದಿನ ನಮಾಝ್ ಮಾಡಿ ಮಸೀದಿಯನ್ನು ನಿರ್ವಹಿಸುತ್ತಿರುವ ಹಿಂದುಗಳು -Vishwanews24

ಪಾಟ್ನಾ, : ದೇಶದಲ್ಲಿ ಧರ್ಮಾಂಧತೆ ಹಾಗೂ ಕೋಮು ಗಲಭೆಯ ಘಟನೆಗಳು ಹೆಚ್ಚುತ್ತಿರುವ ನಡುವೆ ಬಿಹಾರದ ನಲಂದಾ ಜಿಲ್ಲೆಯ ಗ್ರಾಮವೊಂದು ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ನಲಂದಾ ಜಿಲ್ಲೆಯ ಮಾಧಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಇಲ್ಲಿನ 200 ವರ್ಷಗಳ ಹಳೆಯ ಮಸೀದಿಯೊಂದರಲ್ಲಿ ಹಿಂದೂಗಳು ಪ್ರತಿದಿನ ಐದು ಬಾರಿ ನಮಾಝ್ ಮಾಡುತ್ತಿದ್ದಾರೆ. ಅಲ್ಲದೆ, ಹಿಂದೂಗಳೇ ಮಸೀದಿಯನ್ನು ನಿರ್ವಹಿಸುತ್ತಿದ್ದಾರೆ.

”ನಮಗೆ (ಹಿಂದೂಗಳು) ಆಝಾನ್ ತಿಳಿದಿಲ್ಲ. ಆದರೆ, ಪೆನ್‌ಡ್ರೈವ್‌ನಲ್ಲಿ ರೆಕಾರ್ಡಿಂಗ್ ಮಾಡಿದ ಆಝಾನ್ ಅನ್ನು ಧ್ವನಿವರ್ಧಕದಲ್ಲಿ ನುಡಿಸಲಾಗುತ್ತದೆ” ಎಂದು ಗ್ರಾಮದ ನಿವಾಸಿ ಹನ್ಸ್ ಕುಮಾರ್ ಹೇಳಿದ್ದಾರೆ. ಮಾಧಿಯಲ್ಲಿ ಗಣನೀಯ ಸಂಖ್ಯೆಯ ಮುಸ್ಲಿಮರು ಇದ್ದರು. ಆದರೆ, ಅವರು ಕ್ರಮೇಣ ವಲಸೆ ಹೋದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

”ಮಸೀದಿ ನಿರ್ವಹಿಸಲು ಯಾರೊಬ್ಬರೂ ಇರಲಿಲ್ಲ. ಆದುದರಿಂದ ಹಿಂದೂಗಳು ಮುಂದೆ ಬಂದರು” ಎಂದು ಮಸೀದಿ ನಿರ್ವಹಿಸುತ್ತಿರುವ ಗೌತಮ್ ಹೇಳಿದ್ದಾರೆ. ಮಸೀದಿಯನ್ನು ಯಾವಾಗ ನಿರ್ಮಾಣ ಮಾಡಲಾಯಿತು ಹಾಗೂ ಯಾರು ನಿರ್ಮಾಣ ಮಾಡಿದರು ಎಂಬ ಬಗ್ಗೆ ಯಾರೊಬ್ಬರಿಗೂ ತಿಳಿದಿಲ್ಲ. ಆದರೆ, ಹಿಂದೂಗಳು ಯಾವುದೇ ಶುಭ ಸಮಾರಂಭದ ಮುನ್ನ ಮಸೀದಿಗೆ ಭೇಟಿ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

”ಮಸೀದಿಯನ್ನು ದಿನನಿತ್ಯ ಸ್ವಚ್ಚಗೊಳಿಸಲಾಗುತ್ತದೆ. ಅಲ್ಲದೆ, ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ತಮಗೆ ಸಮಸ್ಯೆ ಎದುರಾದಾಗ ಕೂಡ ಜನರು ಇಲ್ಲಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ” ಎಂದು ಗ್ರಾಮದ ಅರ್ಚಕ ಜಾಂಕಿ ಪಂಡಿತ್ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

21 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

47 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

55 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago