ನವದೆಹಲಿ: ‘ಗೋ ರಕ್ಷಣೆ ಹೆಸರಿನಲ್ಲಿ ಕೆಲವು ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿದೆ. ಆದರೆ, ಮುಸ್ಲಿಮರು ಸಹ ಗೋವುಗಳ ರಕ್ಷಣೆಗೆ ಸನ್ನದ್ಧರಾಗಬೇಕು’ ಎಂದು ಕೇಂದ್ರ ಸಚಿವ ರಾಮ್ದಾಸ್ ಆಠವಳೆ ಹೇಳಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತಾದ ‘ಮುಸಲ್ಮಾನ್ ಔರ್ ಯೋಗಿ ಆದಿತ್ಯನಾಥ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ದೇಶದ ಬಲವರ್ಧನೆಗೆ ಹಿಂದೂ-ಮುಸ್ಲಿಂ ಸಾಮರಸ್ಯ ಅಗತ್ಯ. ಮೋದಿ ಸರ್ಕಾರ ಅಧಿಕಾರಿಕ್ಕೆ ಬಂದ ನಂತರ ಕೆಲವು ಮುಸ್ಲಿಮರು ಗೋ ರಕ್ಷಣೆ ಹೆಸರಿನಲ್ಲಿ ಕಿರುಕುಳ ಅನುಭವಿಸುತ್ತಿದ್ದಾರೆ. ಆದರೆ, ಮುಸ್ಲಿಮರು ಹಿಂದೂಗಳು ಪೂಜಿಸುವ ಗೋವುಗಳ ರಕ್ಷಣೆಗೆ ಮುಂದಾಗಬೇಕು’ ಎಂದರು.
‘ಮೋದಿ ಮತ್ತು ಯೋಗಿ ಆದಿತ್ಯನಾಥ್ ಮುಸ್ಲಿಂ ವಿರೋಧಿಗಳಲ್ಲ. ಎಲ್ಲರೊಂದಿಗೆ, ಎಲ್ಲರ ವಿಕಾಸವೆಂಬ (ಸಬ್ಕಾ ಸಾಥ್ ಸಬ್ಕಾ ವಿಕಾಸ್) ಘೋಷಣೆಯೇ ಇದಕ್ಕೆ ಸಾಕ್ಷಿ’ ಎಂದು ತಿಳಿಸಿದರು.
‘ಆದಿತ್ಯನಾಥ್ ಉತ್ತರಪ್ರದೇಶದಲ್ಲಿ ನಕ್ಷತ್ರದಂತೆ ಕಂಗೊಳಿಸುತ್ತಿದ್ದಾರೆ. ಹಿಂದು ಮತ್ತು ಮುಸ್ಲಿಂ ನಡುವೆ ಸಂಘರ್ಷ ಸೃಷ್ಟಿಸುವವರ ಪ್ರಯತ್ನವನ್ನು ವಿಫಲಗೊಳಿಸಬೇಕು. ಅಯೋಧ್ಯೆ ವಿವಾದದ ವಿರುದ್ಧ ಹಿಂದೂ-ಮುಸ್ಲಿಮರು ಕಿತ್ತಾಟ ನಡೆಸದೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ನಿರೀಕ್ಷಿಸಬೇಕು’ ಎಂದರು..
ಈ ಪುಸ್ತಕದ ಲೇಖಕ ಪತ್ರಕರ್ತ ಇರ್ಫಾನ್ ಶೈಖ್. ಆದಿತ್ಯನಾಥ್ ಅವರ ಜೀವನ ಮತ್ತು ಕೆಲಸ, ಅವರ ರಾಜಕೀಯ ವಿಕಸನ ಮತ್ತು ಮುಸ್ಲಿಮರೊಂದಿಗಿನ ಸಂಬಂಧವನ್ನು ಈ ಪುಸ್ತಕ ಒಳಗೊಂಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…