ಮುಸ್ಲಿಮರು ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು, ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ : ಸೋಮಶೇಖರ ರೆಡ್ಡಿ -Vishwanews24

ಬಳ್ಳಾರಿ: ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ನಗರದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದ್ದು, ಅದನ್ನು ಎಲ್ಲರೂ ಬೆಂಬಲಿಸಬೇಕು. ಕಾಯ್ದೆ ವಿರೋಧಿಸಿ ಮತ್ತೊಂದು ಸಲ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ನಾವು ಸುಮ್ಮನೆ ಕೂರಲ್ಲ. ದೇಶದಿಂದ ಹೊರಗೆ ಹಾಕುತ್ತಾರೆ ಎಂಬ ಭಯವಿದ್ದವರು ದೇಶಬಿಟ್ಟು ಹೋಗಬೇಕು. ಇಂದಿನ ರ್‍ಯಾಲಿಯಲ್ಲಿ ಶೇ 5ರಷ್ಟು ಜನ ಬಂದಿದ್ದಾರಷ್ಟೆ. ಜಾಸ್ತಿ ನಕ್ರಾ ಮಾಡಿದರೆ ಇನ್ನುಳಿದ ಶೇ 95ರಷ್ಟು ಜನ ಬರುತ್ತಾರೆ. ಆಗ ಕಾಯ್ದೆ ವಿರೋಧಿಸುವವರು ಯಾರೂ ಉಳಿಯುವುದಿಲ್ಲ’ ಎಂದು ಅವರು ಹೇಳಿದರು.

‘ಯಾರೂ ನಮ್ಮ ತಾಳ್ಮೆ, ಶಾಂತಿ ಪರೀಕ್ಷಿಸಬೇಡಿ. ನಮ್ಮ ದೇಶ, ಪೊಲೀಸರ ಮೇಲೆ ದಾಳಿ ನಡೆಸಿದರೆ ಸರಿಯಿರುವುದಿಲ್ಲ. ಕಾಂಗ್ರೆಸ್‌ ಪುಢಾರಿಗಳು ಸುಳ್ಳು ಹೇಳಿ ದಂಗೆ ಎಬ್ಬಿಸುತ್ತಿದ್ದಾರೆ. ಪಾಕಿಸ್ತಾನಕ್ಕೆ ಹೋಗುವ ಆಸೆ ಇದ್ದವರು ಹೋಗಬಹುದು. ಎಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ಹಾಗೆಯೇ ಇರೋಣ. ಶತ್ರುಗಳ ರೀತಿ ವರ್ತಿಸಿದರೆ ನಮ್ಮ ಉಗ್ರ ರೂಪ ತೋರಿಸಬೇಕಾಗುತ್ತದೆ’ ಎಂದು ಅವರು ಗುಡುಗಿದರು.

‘ಈ ಸೋಮಶೇಖರ ರೆಡ್ಡಿ ಭಯಂಕರ ದೇಶಭಕ್ತ. ನಾನು ಸತ್ತ ಮೇಲೆ ನನ್ನ ಶವ ಕೂಡ ‘ಭಾರತ್‌ ಮಾತಾಕೀ ಜೈ’ ಎಂದು ಹೇಳುತ್ತೆ. ನಿಮ್ಮಂತೆ ನಾವು ಕಳ್ಳ ಭಕ್ತರಲ್ಲ. ನಿಜವಾದ ಭಕ್ತರು. ನಮಗಾದರೆ ಫ್ಯಾಮಿಲಿ ಪ್ಲ್ಯಾನಿಂಗ್‌. ನಿಮಗೆ ಇಲ್ಲವೇ. ನಾವು ಒಬ್ಬೊಬ್ಬರು 50 ಜನರನ್ನು ಹುಟ್ಟಿಸಿ ಜನಸಂಖ್ಯೆ ಹೆಚ್ಚಿಸುತ್ತೇವೆ’ ಎಂದು ಅವರು ಹೇಳಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago