ಬಳ್ಳಾರಿ: ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ನಗರದಲ್ಲಿ ನಡೆದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದ್ದು, ಅದನ್ನು ಎಲ್ಲರೂ ಬೆಂಬಲಿಸಬೇಕು. ಕಾಯ್ದೆ ವಿರೋಧಿಸಿ ಮತ್ತೊಂದು ಸಲ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ನಾವು ಸುಮ್ಮನೆ ಕೂರಲ್ಲ. ದೇಶದಿಂದ ಹೊರಗೆ ಹಾಕುತ್ತಾರೆ ಎಂಬ ಭಯವಿದ್ದವರು ದೇಶಬಿಟ್ಟು ಹೋಗಬೇಕು. ಇಂದಿನ ರ್ಯಾಲಿಯಲ್ಲಿ ಶೇ 5ರಷ್ಟು ಜನ ಬಂದಿದ್ದಾರಷ್ಟೆ. ಜಾಸ್ತಿ ನಕ್ರಾ ಮಾಡಿದರೆ ಇನ್ನುಳಿದ ಶೇ 95ರಷ್ಟು ಜನ ಬರುತ್ತಾರೆ. ಆಗ ಕಾಯ್ದೆ ವಿರೋಧಿಸುವವರು ಯಾರೂ ಉಳಿಯುವುದಿಲ್ಲ’ ಎಂದು ಅವರು ಹೇಳಿದರು.
‘ಯಾರೂ ನಮ್ಮ ತಾಳ್ಮೆ, ಶಾಂತಿ ಪರೀಕ್ಷಿಸಬೇಡಿ. ನಮ್ಮ ದೇಶ, ಪೊಲೀಸರ ಮೇಲೆ ದಾಳಿ ನಡೆಸಿದರೆ ಸರಿಯಿರುವುದಿಲ್ಲ. ಕಾಂಗ್ರೆಸ್ ಪುಢಾರಿಗಳು ಸುಳ್ಳು ಹೇಳಿ ದಂಗೆ ಎಬ್ಬಿಸುತ್ತಿದ್ದಾರೆ. ಪಾಕಿಸ್ತಾನಕ್ಕೆ ಹೋಗುವ ಆಸೆ ಇದ್ದವರು ಹೋಗಬಹುದು. ಎಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ಹಾಗೆಯೇ ಇರೋಣ. ಶತ್ರುಗಳ ರೀತಿ ವರ್ತಿಸಿದರೆ ನಮ್ಮ ಉಗ್ರ ರೂಪ ತೋರಿಸಬೇಕಾಗುತ್ತದೆ’ ಎಂದು ಅವರು ಗುಡುಗಿದರು.
‘ಈ ಸೋಮಶೇಖರ ರೆಡ್ಡಿ ಭಯಂಕರ ದೇಶಭಕ್ತ. ನಾನು ಸತ್ತ ಮೇಲೆ ನನ್ನ ಶವ ಕೂಡ ‘ಭಾರತ್ ಮಾತಾಕೀ ಜೈ’ ಎಂದು ಹೇಳುತ್ತೆ. ನಿಮ್ಮಂತೆ ನಾವು ಕಳ್ಳ ಭಕ್ತರಲ್ಲ. ನಿಜವಾದ ಭಕ್ತರು. ನಮಗಾದರೆ ಫ್ಯಾಮಿಲಿ ಪ್ಲ್ಯಾನಿಂಗ್. ನಿಮಗೆ ಇಲ್ಲವೇ. ನಾವು ಒಬ್ಬೊಬ್ಬರು 50 ಜನರನ್ನು ಹುಟ್ಟಿಸಿ ಜನಸಂಖ್ಯೆ ಹೆಚ್ಚಿಸುತ್ತೇವೆ’ ಎಂದು ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…