ನವದೆಹಲಿ: ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ ನಾವು ಹನುಮಾನ್ ಚಾಲೀಸಾ ಪಠಿಸೋಕೆ ಮಂಗಳವಾರ ರಸ್ತೆ ತಡೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಪಶ್ಚಿಮ ಬಂಗಾಳ ಹೌರಾ ಜಿಲ್ಲಾಧ್ಯಕ್ಷ ಒ.ಪಿ. ಸಿಂಗ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರು ಗ್ರಾಂಡ್ ಟ್ರಂಕ್ ರೋಡ್ ಸೇರಿ ಹಲವು ಪ್ರಮುಖ ರಸ್ತೆಗಳನ್ನು ಬಳಸಿಕೊಂಡು, ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಕಚೇರಿ ತಲುಪಲು ಜನರಿಗೆ ತೊಂದರೆಯಾಗುತ್ತಿದೆ. ಈ ಪದ್ಧತಿ ಎಲ್ಲಿಯವರೆಗೂ ಮುಂದುವರೆಯುತ್ತದೋ ಅಲ್ಲಿಯವರೆಗೆ ನಾವು ಕೂಡ ಪ್ರತಿ ಮಂಗಳವಾರ ಪ್ರಮುಖ ರಸ್ತೆಗಳಲ್ಲಿ ಕುಳಿತು ಹನುಮಾನ ಚಾಲೀನಾ ಪಠಿಸಿ, ಜನ, ವಾಹನಕ್ಕೆ ಸಂಚರಕ್ಕೆ ಅಡ್ಡಿಪಡಿಸಲಿದ್ದೇವೆ ಎಂದು ಹೇಳಿದ್ದಾರೆ.
ಹೌರಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿರುವ ಹನುಮಾನ ದೇಗುಲಗಳಲ್ಲಿ ಪ್ರತಿ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಅವುಗಳ ಎದುರಿನ ರಸ್ತೆಯಲ್ಲೇ ಕುಳಿತು ಹನುಮಾನ ಚಾಲೀಸಾ ಪಠಿಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…