ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಇಟ್ಟುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಕಿಡಿ ಕಾರಿರುವ ಸಿದ್ದರಾಮಯ್ಯ ಅವರು, “ಜಾತಿ-ಧರ್ಮಗಳ ನಡುವೆ ಜಗಳ ಹಚ್ಚಿ ಚುನಾವಣೆಯಲ್ಲಿ ಲಾಭ ಗಳಿಸುವ ದುರುದ್ದೇಶದ, ತಪ್ಪು ಮಾಹಿತಿ ಆಧರಿಸಿದ ಮತ್ತು ಸಂವಿಧಾನ ವಿರೋಧಿಯಾದ ಪರಿಷ್ಕೃತ ಮೀಸಲಾತಿಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು. ಚುನಾವಣೆ ಘೋಷಣೆಗೆ ದಿನ ಎಣಿಕೆ ನಡೆಯುತ್ತಿರುವಾಗ ಅವಸರದಲ್ಲಿ ಪ್ರಕಟಿಸಲಾಗಿರುವ ಮೀಸಲಾತಿ ನೀತಿ ದೋಷಪೂರ್ಣವಾಗಿದೆ” ಎಂದಿದ್ದಾರೆ.
“ಮೀಸಲಾತಿ ನೀತಿ ದೋಷಪೂರ್ಣವಾಗಿದ್ದು, ಅನುಷ್ಠಾನಗೊಳಿಸಲು ಸಮಯವಕಾಶವೇ ಇಲ್ಲ. ವಿಶ್ವಾಸಾರ್ಹ ಮಾಹಿತಿ ಇಲ್ಲದ ಈ ಮೀಸಲಾತಿ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ರದ್ದಾಗುವುದು ಖಂಡಿತ. ಅವಕಾಶ ವಂಚಿತರಿಗೆ ವಿಶೇಷ ಸವಲತ್ತು ನೀಡಿ, ಅವರನ್ನು ಕೂಡ ಮುಖ್ಯವಾಹಿನಿಗೆ ತರಬೇಕು ಎನ್ನುವುದು ಸಂವಿಧಾನದ 14ನೇ ಪರಿಚ್ಛೇದದ ಆಶಯವಾಗಿದೆ. 15 ಮತ್ತು 16ನೇ ಪರಿಚ್ಛೇದವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಪರಿಷ್ಕೃತ ಮೀಸಲಾತಿ ನೀತಿ ಇದಕ್ಕೆ ವಿರುದ್ಧವಾಗಿದೆ” ಎಂದು ತಿಳಿಸಿದ್ದಾರೆ.
“ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಜಾತಿ ವ್ಯವಸ್ಥೆ ಇರುವುದರಿಂದಲೇ ಅಸಮಾನತೆ ನಿರ್ಮಾಣವಾಗಿರುವುದು. ಇನ್ನೂ ಎಷ್ಟು ಕಾಲ ಮೀಸಲಾತಿ ಪದ್ಧತಿ ಇರಬೇಕು ಎಂದು ವ್ಯಂಗ್ಯವಾಡುವವರು ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಬಿಜೆಪಿ ಸರ್ಕಾರವನ್ನು ತಿವಿದಿದ್ದಾರೆ.
“1995ರಿಂದ ಮುಸ್ಲಿಮರಿಗೆ ರಾಜ್ಯದಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಈಗ ತೆಗೆದುಹಾಕಲು ಕಾರಣವೇನು? ಅವರನ್ನು ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಮುಸ್ಲಿಮರಲ್ಲಿ ಯರಾದರೂ ಬದಲಾವಣೆ ಕೇಳಿದ್ದಾರಾ?. ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳಕ್ಕಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಅದು 2020ರಲ್ಲಿ ವರದಿ ನೀಡಿತ್ತು, ವರದಿ ಬಂದು 3 ವರ್ಷ ಕಳೆದರೂ ನಿದ್ದೆ ಮಾಡುತ್ತಿದ್ದ ರಾಜ್ಯ ಸರ್ಕಾರ ಈಗ ಎದ್ದು ಕೂತಿದೆ” ಎಂದು ವ್ಯಂಗ್ಯವಾಡಿದ್ದಾರೆ.
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…