Featured

ಮುಸ್ಲಿಮರ ಮೀಸಲಾತಿ ರದ್ದು – ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಆಕ್ರೋಶ – Vishwanews24

ಮುಸ್ಲಿಮರ ಮೀಸಲಾತಿ ರದ್ದು – ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಇಟ್ಟುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕಿಡಿ ಕಾರಿರುವ ಸಿದ್ದರಾಮಯ್ಯ ಅವರು, “ಜಾತಿ-ಧರ್ಮಗಳ ನಡುವೆ ಜಗಳ ಹಚ್ಚಿ ಚುನಾವಣೆಯಲ್ಲಿ ಲಾಭ ಗಳಿಸುವ ದುರುದ್ದೇಶದ, ತಪ್ಪು ಮಾಹಿತಿ ಆಧರಿಸಿದ ಮತ್ತು ಸಂವಿಧಾನ ವಿರೋಧಿಯಾದ ಪರಿಷ್ಕೃತ ಮೀಸಲಾತಿಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು. ಚುನಾವಣೆ ಘೋಷಣೆಗೆ ದಿನ ಎಣಿಕೆ ನಡೆಯುತ್ತಿರುವಾಗ ಅವಸರದಲ್ಲಿ ಪ್ರಕಟಿಸಲಾಗಿರುವ ಮೀಸಲಾತಿ ನೀತಿ ದೋಷಪೂರ್ಣವಾಗಿದೆ” ಎಂದಿದ್ದಾರೆ.

“ಮೀಸಲಾತಿ ನೀತಿ ದೋಷಪೂರ್ಣವಾಗಿದ್ದು, ಅನುಷ್ಠಾನಗೊಳಿಸಲು ಸಮಯವಕಾಶವೇ ಇಲ್ಲ. ವಿಶ್ವಾಸಾರ್ಹ ಮಾಹಿತಿ ಇಲ್ಲದ ಈ ಮೀಸಲಾತಿ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ರದ್ದಾಗುವುದು ಖಂಡಿತ. ಅವಕಾಶ ವಂಚಿತರಿಗೆ ವಿಶೇಷ ಸವಲತ್ತು ನೀಡಿ, ಅವರನ್ನು ಕೂಡ ಮುಖ್ಯವಾಹಿನಿಗೆ ತರಬೇಕು ಎನ್ನುವುದು ಸಂವಿಧಾನದ 14ನೇ ಪರಿಚ್ಛೇದದ ಆಶಯವಾಗಿದೆ. 15 ಮತ್ತು 16ನೇ ಪರಿಚ್ಛೇದವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಪರಿಷ್ಕೃತ ಮೀಸಲಾತಿ ನೀತಿ ಇದಕ್ಕೆ ವಿರುದ್ಧವಾಗಿದೆ” ಎಂದು ತಿಳಿಸಿದ್ದಾರೆ.

“ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಜಾತಿ ವ್ಯವಸ್ಥೆ ಇರುವುದರಿಂದಲೇ ಅಸಮಾನತೆ ನಿರ್ಮಾಣವಾಗಿರುವುದು. ಇನ್ನೂ ಎಷ್ಟು ಕಾಲ ಮೀಸಲಾತಿ ಪದ್ಧತಿ ಇರಬೇಕು ಎಂದು ವ್ಯಂಗ್ಯವಾಡುವವರು ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಬಿಜೆಪಿ ಸರ್ಕಾರವನ್ನು ತಿವಿದಿದ್ದಾರೆ.

“1995ರಿಂದ ಮುಸ್ಲಿಮರಿಗೆ ರಾಜ್ಯದಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಈಗ ತೆಗೆದುಹಾಕಲು ಕಾರಣವೇನು? ಅವರನ್ನು ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಮುಸ್ಲಿಮರಲ್ಲಿ ಯರಾದರೂ ಬದಲಾವಣೆ ಕೇಳಿದ್ದಾರಾ?. ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳಕ್ಕಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಅದು 2020ರಲ್ಲಿ ವರದಿ ನೀಡಿತ್ತು, ವರದಿ ಬಂದು 3 ವರ್ಷ ಕಳೆದರೂ ನಿದ್ದೆ ಮಾಡುತ್ತಿದ್ದ ರಾಜ್ಯ ಸರ್ಕಾರ ಈಗ ಎದ್ದು ಕೂತಿದೆ” ಎಂದು ವ್ಯಂಗ್ಯವಾಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago