Featured

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR

ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ದೂರು ನೀಡಿದ ದೂರಿನಂತೆ ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜು.23ರಂದು ಸಂಜೆ ಚಿಕ್ಕಮಗಳೂರಿನ ಆಝಾದ್ ಪಾರ್ಕ್ ನಲ್ಲಿ ‘ಯೂತ್ ಫಾರ್ ನೇಷನ್’ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿ.ಟಿ. ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಸಿಎಎ-ಎನ್ಆರ್ಸಿ ಹಾಗೂ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸಿದ್ದರು. ಈ ವೇಳೆ ಮುಸ್ಲಿಮ್ ಸಮುದಾಯವನ್ನು ಉದ್ದೇಶಿಸಿ ನೀಟ್ ಪರೀಕ್ಷೆಗೂ ಹಾಗೂ ಮುಲ್ಲಾಗಳಿಗೂ ಏನು ಸಂಬಂಧ?, ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ ಎಂದು ನೀಡಿದ್ದ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಈ ನಿಂದನಾತ್ಮಕ, ಪ್ರಚೋದನಕಾರಿ ಭಾಷಣವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಎರಡು ಸಮುದಾಯಗಳ ನಡುವೆ ದ್ವೇಷ ಹಾಗೂ ಅಶಾಂತಿ ಹಬ್ಬಿಸುವಂತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ದೂರಿನನ್ವಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

3 minutes ago

‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24

BPL ಕಾರ್ಡ್‌ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ    ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ…

17 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ…

27 minutes ago

ಮಂಗಳೂರು:ಕೇಂದ್ರ ಸರಕಾರದ ವೈಫಲ್ಯದಿಂದ ವಿದ್ಯಾರ್ಥಿಗಳು ಬೀದಿಗೆ: ಪದ್ಮರಾಜ್ – vishwanews24

ಮಂಗಳೂರು:  ಯಾವತ್ತೂ ರಾಜಕೀಯದ ಬಲಿಪಶು ಆಗಬೇಡಿ : ವಿದ್ಯಾರ್ಥಿಗಳಿಗೆ ಕರೆ ನೀಡಿದ ಪದ್ಮರಾಜ್ ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ…

34 minutes ago

ಅನುಮತಿ ಇಲ್ಲದೆ ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೊ ಹಂಚಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ – vishwanews24

ಕೋರ್ಟ್ ಕಲಾಪಗಳ ವಿಡಿಯೋ ಹಂಚಿಕೊಳ್ಳುವ ಮುನ್ನ ಎಚ್ಚರ.. ಅನುಮತಿ ಇಲ್ಲದೆ ಆಡಿಯೋ-ವಿಡಿಯೋ ಪೋಸ್ಟ್, ರೀಲ್ಸ್ ಮಾಡುವಂತಿಲ್ಲ; ಸುಪ್ರೀಂ ಆದೇಶ ನವದೆಹಲಿ:…

54 minutes ago

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ   ಉಡುಪಿ : ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ…

1 hour ago