ಮೂಡಬಿದಿರೆ: ಇನ್‌ಸ್ಟಾಗ್ರಾಂ ಪ್ರೀತಿ ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ – vishwanews24

Featured, ದಕ್ಷಿಣ ಕನ್ನಡ

ಮೂಡಬಿದಿರೆ: ಇನ್‌ಸ್ಟಾಗ್ರಾಂ ಪ್ರೀತಿ ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಆತ್ಮಹತ್ಯೆ

ಮೂಡಬಿದಿರೆ: ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಮಿಜಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬಡಗುಮಿಜಾರು ಗ್ರಾಮದ ಮರಕಡ ಬಳಿ ಮೇ 28 ರಂದು ನಡೆದಿದೆ.

ಮೃತಪಟ್ಟವರನ್ನು ಬಡಗುಮಿಜಾರಿನ ನಮಿಕ್ಷಾ ಶೆಟ್ಟಿ (29) ಮತ್ತು ಆಕೆಯ ಪ್ರಿಯಕರ ಪ್ರಶಾಂತ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ಮೂಲತಃ ನಿಡೋಡಿಯವರಾಗಿದ್ದು, ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನಮಿಕ್ಷಾ ವಿವಾಹಿತರಾಗಿದ್ದು, ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆಕೆಯ ಪತಿ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮೂಲತಃ ಬಾಗಲಕೋಟೆಯವರಾದ ಪ್ರಶಾಂತ್ ಕೂಡ ವಿವಾಹಿತರಾಗಿದ್ದರು ಎಂದು ಹೇಳಲಾಗಿದೆ.

ಮಂಗಳೂರಲ್ಲಿ ನಡೆದ ಘಟನೆಯನ್ನುಸರಕಾರ ಗಂಭೀರವಾಗಿ ಪರಿಗಣಿಸಿದೆ ; ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ : ಜಿ.ಪರಮೇಶ್ವರ್‌ – vishwanews24

ಇಬ್ಬರೂ ಇನ್‌ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದು, ಅವರ ಸ್ನೇಹ ಕ್ರಮೇಣ ಪ್ರೀತಿ ಸಂಬಂಧವಾಗಿ ಬೆಳೆದಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅವರಿಬ್ಬರ ನಡುವೆ ಜಗಳ ನಡೆದಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬಾವಿಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಮಿಕ್ಷಾ ಅವರ ತಂದೆ ಮತ್ತು ಪ್ರಶಾಂತ್ ಅವರ ಸಹೋದರ ಪ್ರತ್ಯೇಕವಾಗಿ ನೀಡಿದ ದೂರುಗಳ ಆಧಾರದ ಮೇಲೆ ಮೂಡಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ನಡೆದ ಘಟನೆಯನ್ನುಸರಕಾರ ಗಂಭೀರವಾಗಿ ಪರಿಗಣಿಸಿದೆ ; ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ : ಜಿ.ಪರಮೇಶ್ವರ್‌ – vishwanews24

Leave a Reply