ಮೂಡಬಿದಿರೆ : ಹುಟ್ಟು ಹಬ್ಬದ ಹಿಂದಿನ ದಿನವೇ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.
ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ.
ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಆಸು ನೀಗಿದ್ದಾರೆಂದು ತಿಳಿದು ಬಂದಿದೆ.
ಇನ್ನು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೃತ ಪ್ರದೀಪ್ ಅವರು ಇಂದು ತನ್ನ 39ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…