ಮೂಡಬಿದಿರೆ : ದನ ಕಳ್ಳರ ಹಾವಳಿಯಿಂದ ರೋಸಿ ಹೋಗಿರುವ ಮಾಂಟ್ರಾಡಿ ಗ್ರಾಮದ ಪೆಂಚಾರಿನ ಗ್ರಾಮಸ್ಥರೊಬ್ಬರು ದೈವ, ದೇವರಿಗೆ ಮೊರೆ ಹೋಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪರಿಸರಗಳಲ್ಲಿ ದನ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಮೇವಿಗೆಂದು ಹೊರಟ ದನಗಳು ಮನೆ ಸೇರದೆ ಕಳ್ಳಕಾಕರ ಕೈಗೆ ಸಿಕ್ಕಿ ಕಸಾಯಿಖಾನೆ ಸೇರುತ್ತಿದೆ. ಹಲವು ಪೋಲೀಸ್ ದೂರುಗಳು ದಾಖಲಾದರೂ ದನ ಕಳೆದುಕೊಂಡವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸಾಲ ಮಾಡಿ ದನ ಖರೀದಿಸಿ ಜೀವನ ಸಾಗಿಸುತ್ತಿರುವ ಬಡ ಕುಟುಂಬದ ದನಗಳನ್ನು ಕಳ್ಳತನ ಮಾಡುತ್ತಿರುವುದು ಹೆಚ್ಚಾಗಲಾರಂಭಿಸಿದೆ.
ದನಕಳ್ಳರ ಕಾಟ ತಡೆಯಲಾರದೆ ಜಿಲ್ಲೆಯ ಜನ ದೈವ-ದೇವರುಗಳ ಮೊರೆ ಹೋಗಿದ್ದಾರೆ. ದನ ಕಳ್ಳರ ಮೇಲೆ ಧರ್ಮಸ್ಥಳ, ಪಣೊಲಿಬೈಲು,ಮಾರಣಬೆಟ್ಟು, ಕೊರಗಜ್ಜ ಮೊದಲಾದ ದೈವಗಳಿಗೆ ಹರಕೆ ಹೊರಲಾಂಭಿಸಿದ್ದಾರೆ. ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು ಎಂದು ದೇವರ ಮೊರೆ ಹೋಗಿರುತ್ತೇವೆ-ನೊಂದ ದನಗಳ ಯಾಜಮಾನರು’ ಎಂದು ಫ್ಲೆಕ್ಸ್ನಲ್ಲಿ ಮುದ್ರಿಸಲಾಗಿದೆ. ಕಳವಾದ ದನದ ಚಿತ್ರವನ್ನು ಕೂಡ ಪ್ರಕಟಿಸಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…