ಮೂಡಬಿದಿರೆ : ದನ ಕಳ್ಳರ ಹಾವಳಿಯಿಂದ ರೋಸಿ ಹೋಗಿರುವ ಮಾಂಟ್ರಾಡಿ ಗ್ರಾಮದ ಪೆಂಚಾರಿನ ಗ್ರಾಮಸ್ಥರೊಬ್ಬರು ದೈವ, ದೇವರಿಗೆ ಮೊರೆ ಹೋಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪರಿಸರಗಳಲ್ಲಿ ದನ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಮೇವಿಗೆಂದು ಹೊರಟ ದನಗಳು ಮನೆ ಸೇರದೆ ಕಳ್ಳಕಾಕರ ಕೈಗೆ ಸಿಕ್ಕಿ ಕಸಾಯಿಖಾನೆ ಸೇರುತ್ತಿದೆ. ಹಲವು ಪೋಲೀಸ್ ದೂರುಗಳು ದಾಖಲಾದರೂ ದನ ಕಳೆದುಕೊಂಡವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸಾಲ ಮಾಡಿ ದನ ಖರೀದಿಸಿ ಜೀವನ ಸಾಗಿಸುತ್ತಿರುವ ಬಡ ಕುಟುಂಬದ ದನಗಳನ್ನು ಕಳ್ಳತನ ಮಾಡುತ್ತಿರುವುದು ಹೆಚ್ಚಾಗಲಾರಂಭಿಸಿದೆ.
ದನಕಳ್ಳರ ಕಾಟ ತಡೆಯಲಾರದೆ ಜಿಲ್ಲೆಯ ಜನ ದೈವ-ದೇವರುಗಳ ಮೊರೆ ಹೋಗಿದ್ದಾರೆ. ದನ ಕಳ್ಳರ ಮೇಲೆ ಧರ್ಮಸ್ಥಳ, ಪಣೊಲಿಬೈಲು,ಮಾರಣಬೆಟ್ಟು, ಕೊರಗಜ್ಜ ಮೊದಲಾದ ದೈವಗಳಿಗೆ ಹರಕೆ ಹೊರಲಾಂಭಿಸಿದ್ದಾರೆ. ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು ಎಂದು ದೇವರ ಮೊರೆ ಹೋಗಿರುತ್ತೇವೆ-ನೊಂದ ದನಗಳ ಯಾಜಮಾನರು’ ಎಂದು ಫ್ಲೆಕ್ಸ್ನಲ್ಲಿ ಮುದ್ರಿಸಲಾಗಿದೆ. ಕಳವಾದ ದನದ ಚಿತ್ರವನ್ನು ಕೂಡ ಪ್ರಕಟಿಸಲಾಗಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…