ಮೂಡಬಿದಿರೆ : ಮೂಡಬಿದಿರೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಆರೋಪಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಪ್ರಭಾವ ಬಳಿಸಿ ಬಿಡುಗಡೆಗೊಳಿಸಿದ್ದು, ಇದು ಹಾಲಿ ಶಾಸಕರು ನೈತಿಕ ಪೊಲೀಸ್ ಗಿರಿಗೆ ನೇರ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ ಆರೋಪಿಸಿದ್ದಾರೆ.
ಮೂಡಬಿದಿರೆಯಲ್ಲಿ ಮಾತನಾಡಿದ ಅವರು ಹಿಂದೂ ಮಹಿಳೆಯರಿಬ್ಬರು ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ಮಹಿಳೆಯರಿಗೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ವತಃ ಸ್ಥಳೀಯ ಹಾಲಿ ಶಾಸಕರು ಠಾಣೆಗೆ ತೆರಳಿ ತನ್ನ ಪ್ರಭಾವ ಬಳಸಿ ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಆರೋಪಿ ಈ ಘಟನೆಯ ಪೋಟೋವನ್ನು ತನ್ನ ಸ್ಟೇಟಸ್ನಲ್ಲಿ ಹಾಕಿ ಸಂಭ್ರಮಿಸಿ ಕಾನೂನಿಗೆ ಸವಾಲೊಡ್ಡಿದ್ದಾರೆ ಎಂದು ದೂರಿದರು. ಈಗಿನ ಶಾಸಕರು ಬೆಂಬಲ ನೀಡುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದರು.
ಈ ಬಗ್ಗೆ ಜಿಲ್ಲಾ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗುವುದು. ಅಲ್ಲದೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯರ ಮೂಲಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…