ಮಂಗಳೂರು: ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಮಹಿಳೆಯೊಬ್ಬರು ಆರೋಪಿಸಿದ್ದು, ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಕುರಿತಾಗಿ ಬಂದಿರುವ ವಿಷಯದ ಬಗ್ಗೆ ಉತ್ತರ ವಿಭಾಗದ ಎಸಿಪಿ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ವಿರುದ್ಧ ಇದುವರೆಗೆ ಯಾವುದೇ ಮಹಿಳೆ ಲೈಂಗಿಕ ಕಿರುಕುಳದ ಕುರಿತು ನೇರವಾಗಿ ದೂರು ನೀಡಿಲ್ಲ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:
ಇಬ್ಬರು ಸಹೋದರಿಯರ ನಡುವೆ ಕೆಲವು ವೈಯಕ್ತಿಕ ವಿವಾದವಿದ್ದು, ಆ ವಿಚಾರದಲ್ಲಿ ಇನ್ಸ್ಪೆಕ್ಟರ್ ಮತ್ತೊಂದು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಆ ಪ್ರಕರಣ ಈಗ ನ್ಯಾಯಾಲಯದಲ್ಲಿದ್ದು, ಅಲ್ಲಿ ನಡೆದ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನ ಕಸ್ಟಡಿಯನ್ನು ತಾಯಿಗೆ ನೀಡಲಾಗಿದೆ. ಆದ್ದರಿಂದ ಆ ವಿಷಯದಲ್ಲಿ ಇನ್ಸ್ಪೆಕ್ಟರ್ ಕೈಗೊಂಡ ಕ್ರಮ ಕಾನೂನುಬದ್ಧವಾಗಿರುವುದರಿಂದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
ಯಾವುದೇ ಪೀಡಿತ ಮಹಿಳೆ ಮುಂದೆ ಬಂದು ದೂರು ನೀಡಲು ಇಚ್ಛಿಸಿದರೆ ಅವರಿಗೆ ಅವಕಾಶವಿದ್ದು, ಅಂತಹ ದೂರು ಬಂದರೆ ಅದರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸಂಬಂಧವಿಲ್ಲದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಮೂರನೇ ವ್ಯಕ್ತಿಯಾದ ಮಹಿಳೆಯ ವೈಯಕ್ತಿಕ ಸಂಬಂಧಗಳ ಬಗ್ಗೆ ವಿಚಾರಣೆ ನಡೆಸುವುದು ಗೌಪ್ಯತೆ ಉಲ್ಲಂಘನೆಯ ಪ್ರಶ್ನೆಯನ್ನು ಎಬ್ಬಿಸಬಹುದು ಎಂಬುದನ್ನೂ ಅವರು ಹೇಳಿದ್ದಾರೆ.
ಇದನ್ನೂ ಓದಿ:
ಇದಲ್ಲದೆ, ದೂರುದಾರರು ಕಚೇರಿಗೆ ಬಂದಾಗ ತೋರಿಸಿದ್ದ ವಿಡಿಯೋದಲ್ಲಿ ಇನ್ಸ್ಪೆಕ್ಟರ್ ಗೋಡೆ ಹಾರಿರುವ ದೃಶ್ಯ ಮಾತ್ರ ಕಂಡಿದ್ದು, ಆ ಮನೆಯ ಮಾಲೀಕರಿಂದ ಯಾವುದೇ ದೂರು ಇಲ್ಲದ ಹಿನ್ನೆಲೆಯಲ್ಲಿ ಆ ವಿಚಾರದಲ್ಲೂ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ. ಈ ನಡುವೆ ಕೆಲವು ಆಡಿಯೋಗಳು ಹೊರಬಂದಿರುವ ಕುರಿತು ತಮಗೆ ಹೊಸ ಮಾಹಿತಿ ಸಿಕ್ಕಿರುವುದಾಗಿ ಹೇಳಿದ ಅವರು, ಎಸಿಪಿ ನಡೆಸುವ ತನಿಖೆಯ ವರದಿ ಬಳಿಕ ವಾಸ್ತವಾಂಶಗಳು ಸ್ಪಷ್ಟವಾಗಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…