ಮಂಗಳೂರು, ಮಾರ್ಚ್ 18 : ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ನಲ್ಲಿ ವಾರ್ಡನ್ ಗಳು ವಿದ್ಯಾರ್ಥಿಗಳಿಗೆ ಲಾಠಿ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಇದೀಗ ವಿದ್ಯಾರ್ಥಿಗಳಿಂದ ವ್ಯಕ್ತವಾಗಿದೆ. ಮಾ 17 ರ ಶನಿವಾರ ಈ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಕೊಠಡಿಗೆ ನುಗ್ಗಿದ್ದ ವಾರ್ಡನ್ ಗಳ ತಂಡ ಕ್ಷುಲಕ ಕಾರಣಕ್ಕೆ ಲಾಠಿ ಹಿಡಿದು ಸುಮಾರು 20ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ನೊಂದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಥಳಿತಕ್ಕೆ ಒಳಗಾದ 20 ವಿದ್ಯಾಥಿಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ವಿವರ
ವಿದ್ಯಾರ್ಥಿಗಳು ನೀಡಿದ ಮಾಹಿತಿಯಂತೆ, ಪಿಯುಸಿ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಸಂಭ್ರಮಾಚರಣೆಗಾಗಿ ಹಾಸ್ಟೆಲ್ ನ ಕ್ಯಾಂಟೀನ್ ಗೆ ತೆರಳಿದ್ದಾರೆ. ಅಲ್ಲಿ ಊಟ ಸರಿ ಇಲ್ಲವೆಂದು ಕ್ಯಾಂಟಿನ್ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿ ವಿದ್ಯಾರ್ಥಿಗಳು ತಮ್ಮ ತಮ್ಮ ಕೊಠಡಿಗೆ ಹಿಂತಿರುಗಿದ್ದರು. ಆದರೆ ಕೆಲ ಸಮಯದ ಬಳಿಕ ಇದೇ ನೆಪ ಇಟ್ಟುಕೊಂಡು ಆಗಮಿಸಿದ ಪಾನಮತ್ತರಾದ ವಾರ್ಡನ್ ಗಳ ತಂಡವು ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸತೊಡಗಿದ್ದಾರೆ. ಥಳಿಸುವ ವಿಡಿಯೋವನ್ನು ಸ್ವತಃ ವಿದ್ಯಾರ್ಥಿಗಳೇ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…