ಮಂಗಳೂರು, ಮಾರ್ಚ್ 18 : ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ನಲ್ಲಿ ವಾರ್ಡನ್ ಗಳು ವಿದ್ಯಾರ್ಥಿಗಳಿಗೆ ಲಾಠಿ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಇದೀಗ ವಿದ್ಯಾರ್ಥಿಗಳಿಂದ ವ್ಯಕ್ತವಾಗಿದೆ. ಮಾ 17 ರ ಶನಿವಾರ ಈ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಕೊಠಡಿಗೆ ನುಗ್ಗಿದ್ದ ವಾರ್ಡನ್ ಗಳ ತಂಡ ಕ್ಷುಲಕ ಕಾರಣಕ್ಕೆ ಲಾಠಿ ಹಿಡಿದು ಸುಮಾರು 20ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ನೊಂದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಥಳಿತಕ್ಕೆ ಒಳಗಾದ 20 ವಿದ್ಯಾಥಿಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ವಿವರ
ವಿದ್ಯಾರ್ಥಿಗಳು ನೀಡಿದ ಮಾಹಿತಿಯಂತೆ, ಪಿಯುಸಿ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಸಂಭ್ರಮಾಚರಣೆಗಾಗಿ ಹಾಸ್ಟೆಲ್ ನ ಕ್ಯಾಂಟೀನ್ ಗೆ ತೆರಳಿದ್ದಾರೆ. ಅಲ್ಲಿ ಊಟ ಸರಿ ಇಲ್ಲವೆಂದು ಕ್ಯಾಂಟಿನ್ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿ ವಿದ್ಯಾರ್ಥಿಗಳು ತಮ್ಮ ತಮ್ಮ ಕೊಠಡಿಗೆ ಹಿಂತಿರುಗಿದ್ದರು. ಆದರೆ ಕೆಲ ಸಮಯದ ಬಳಿಕ ಇದೇ ನೆಪ ಇಟ್ಟುಕೊಂಡು ಆಗಮಿಸಿದ ಪಾನಮತ್ತರಾದ ವಾರ್ಡನ್ ಗಳ ತಂಡವು ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸತೊಡಗಿದ್ದಾರೆ. ಥಳಿಸುವ ವಿಡಿಯೋವನ್ನು ಸ್ವತಃ ವಿದ್ಯಾರ್ಥಿಗಳೇ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…