Featured

ಮೂಡಬಿದ್ರಿ : ಮುಸ್ಲಿಂ ವ್ಯಕ್ತಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ – Vishwanews24

ಮೂಡಬಿದ್ರಿ : ಮುಸ್ಲಿಂ ವ್ಯಕ್ತಿಯ ಮೇಲೆ  ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

ಮೂಡಬಿದ್ರಿ : ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಮುಲ್ಲರಪಟ್ನ ನಿವಾಸಿ ಇಸಾಕ್ (45) ಎಂದು ಗುರುತಿಸಲಾಗಿದೆ. ಇವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗಲು ‘ಮಹಾ ಗಣೇಶ’ ಎಂಬ ಖಾಸಗಿ ಬಸ್ ಹತ್ತಿದ್ದಾರೆ. ಸ್ವಲ್ಪ ದೂರ ಹೋದ ಬಳಿಕ ವಿದ್ಯಾರ್ಥಿಗಳು, ಇತರ ಪ್ರಯಾಣಿಕರು ಬಸ್ ಹತ್ತಿದ್ದರಿಂದ ವಿಪರೀತ ಪ್ರಯಾಣಿಕ ದಟ್ಟಣೆ ಉಂಟಾಗಿದೆ. ಇಸಾಕ್ ಅವರು ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಮಹಿಳೆಯೊಬ್ಬರು ಬ್ಯಾಗ್ ಹಿಡಿದುಕೊಳ್ಳುವಂತೆ ಇಸಾಕ್ ಅವರಿಗೆ ನೀಡಿದ್ದಾರೆ.

ಅವರ ಮನವಿಯಂತೆ ಇಸಾಕ್ ಬ್ಯಾಗ್ ತೆಗೆದುಕೊಂಡಿದ್ದು, ಮಹಿಳೆ ತಾನು ಇಳಿಯುವ ಜಾಗ ತಲುಪಿದಾಗ ಇಸಾಕ್ ಅವರಿಂದ ಬ್ಯಾಗ್ ಪಡೆದು ಬಸ್ ‘ನಿಂದ ಇಳಿದಿದ್ದಾರೆ ಎನ್ನಲಾಗಿದೆ.

ಇದಾದ ಸ್ವಲ್ಪ ಹೊತ್ತಿನಲ್ಲೇ ಬಸ್ ಕಂಡೆಕ್ಟರ್, ಇಸಾಕ್ ಅವರ ಬಳಿ ಬಂದು ತಗಾದೆ ತೆಗೆದು, ನೀವು ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದೀರಿ, ಮಹಿಳೆಯ ಮೈ ಮುಟ್ಟಿದ್ದೀರಿ ಎಂದು ಸುಳ್ಳು ಆರೋಪ ಮಾಡಿದ್ದಾನೆ. ಮಾತ್ರವಲ್ಲ ಬಸ್ ನಿಲ್ಲಿಸಿ ಇಸಾಕ್ ಅವರನ್ನು ಕೆಳಗಿಳಿಸಿ ಹಲ್ಲೆ ನಡೆಸಿದ್ದಾನೆ. ಈ ಮಧ್ಯೆ ಕೆಲವರಿಗೆ ಮೊಬೈಲ್ ನಲ್ಲಿ ಕರೆ ಮಾಡಿ ಕೆಲವು ಯುವಕರನ್ನು ಅಲ್ಲಿಗೆ ಕರೆಸಿಕೊಂಡಿದ್ದಾನೆ. ಆ ಗುಂಪಿಗೆ ಇಸಾಕ್ ಅವರನ್ನು ಹಸ್ತಾಂತರಿಸಿ ಬಸ್ ಕಂಡೆಕ್ಟರ್ ಬಸ್’ನೊಂದಿಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ.

ಸಂಘಪರಿವಾರಕ್ಕೆ ಸೇರಿದ ಆ ಗುಂಪು ಇಸಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯಿಂದ ಬೆನ್ನು, ಕೈ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ನಿರಂತರವಾಗಿ ಹಲ್ಲೆ ನಡೆಸಿದ್ದರಿಂದ ಇಸಾಕ್ ತೀವ್ರ ಅಸ್ವಸ್ಥರಾಗಿದ್ದಾರೆ. ಇದನ್ನು ಕಂಡ ಸಂಘಪರಿವಾರದ ಕಾರ್ಯಕರ್ತರು ಬಳಿಕ ಇಸಾಕ್ ಅವರಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಪೊಲೀಸರಿಗೆ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಸಾಕ್ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹಲ್ಲೆಯಿಂದ ಇಸಾಕ್ ಅವರ ಬೆನ್ನು ಕೈ ಕಾಲುಗಳಲ್ಲಿ ತೀವ್ರವಾದ ಬಾಸುಂಡೆ ಎದ್ದಿದೆ. ಬೆನ್ನಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು, ತೀವ್ರ ನೋವು ಇದ್ದರೂ ವೈದ್ಯರಲ್ಲಿ ಅದನ್ನು ತೋರಿಸದಂತೆ ಪೊಲೀಸರು ಇಸಾಕ್ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ವೈದ್ಯರು ಕೂಡ ಇಸಾಕ್ ಅವರ ಅಂಗಿ ತೆಗೆದು ಪರಿಶೀಲನೆ ನಡೆಸಿಲ್ಲ. ಕೇವಲ ರಕ್ತದೊತ್ತಡ ಪರೀಕ್ಷೆ ಮಾಡಿ ಇಸಾಕ್ ಅವರನ್ನು ಪೊಲೀಸರು ಬಂಟ್ವಾಳ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಇಸಾಕ್ ಅವರ ಕುಟುಂಬದವರು ಠಾಣೆಗೆ ಬಂದಿದ್ದು, ಸಂಜೆ 5.30ರವರೆಗೆ ಇಸಾಕ್ ಅವರನ್ನು ಠಾಣೆಯಲ್ಲೇ ಕೂರಿಸಲಾಗಿತ್ತು. ಬಳಿಕ ಇಸಾಕ್ ಅವರಿಂದ ಹೇಳಿಕೆ ಪಡೆದು ಕುಟುಂಬದೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಕುಟುಂಬ ಮನವಿ ಮಾಡಿದಾಗ, ಹಾಗೆ ಮಾಡಲು ನಮಗೆ ಮುಕ್ತ ಸ್ವಾತಂತ್ರ್ಯವಿಲ್ಲ ಎಂದು ಬಂಟ್ವಾಳ ಠಾಣೆ ಪೊಲೀಸರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago