ಮಂಗಳೂರು: ಮೂಡಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಗುರುವಾರ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.
ಮಂಗಳೂರಿನ ಕಿನ್ನಿಗೋಳಿ ತೋಕೂರು ನಿವಾಸಿ ಲೋಹಿತ್ ದೇವಾಡಿಗ(26) ಸಾವನ್ನಪ್ಪಿದ ಯುವಕ.
ಈತ ಬುಧವಾರ ನಡೆದ ಕಂಬಳಕ್ಕಾಗಿ ಬಂದಿದ್ದು ರಾತ್ರಿಯೂ ಕಂಬಳದಲ್ಲಿ ಭಾಗಿಯಾಗಿದ್ದನು. ಆದರೆ ಗುರುವಾರ ಮುಂಜಾನೆ ಮನೆಗೂ ಬಾರದೆ ನಾಪತ್ತೆಯಾಗಿದ್ದನು. ಇದರಿಂದ ಹೆದರಿದ ಮನೆಯವರು ಎಲ್ಲರಲ್ಲಿ ವಿಚಾರಿಸಿದ್ದರು. ಆದರೆ ಕಂಬಳ ನಡೆದ ಪ್ರದೇಶದ ಒಂದು ತೆರೆದ ಬಾವಿಯಲ್ಲಿ ಲೋಹಿತ್ ಶವವಾಗಿ ಪತ್ತೆಯಾಗಿದ್ದಾನೆ.
ರೋಹಿತ್ ಅವರ ಮೃತದೇಹ ಒಂಟಿಕಟ್ಟೆಯಿಂದ ಸುಮಾರು ಮುಕ್ಕಾಲು ಕಿ.ಮೀ ದೂರದಲ್ಲಿನ ಎನಿಕ್ರಿಪಲ್ಲ ಎಂಬಲ್ಲಿರುವ ಆವರಣದ ಬಾವಿಯಲ್ಲಿ ಪತ್ತೆಯಾಗಿದ್ದು, ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ ಎಂದು ತಿಳಿದು ಬಂದಿದೆ.
ಸದ್ಯ ಮೂಡಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿ ಕೊಲೆಯಾಗಿರಬಹುದು ಎಂದು ಶಂಕಿಸಿ, ತನಿಖೆ ಆರಂಭಿಸಿದ್ದಾರೆ.
ಘಟನೆಯ ಬಗ್ಗೆ ಮೃತನ ಸಹೋದರ ನಿಶ್ಚಿತ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…