ಮಂಗಳೂರು: ಮೂಡಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಗುರುವಾರ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.
ಮಂಗಳೂರಿನ ಕಿನ್ನಿಗೋಳಿ ತೋಕೂರು ನಿವಾಸಿ ಲೋಹಿತ್ ದೇವಾಡಿಗ(26) ಸಾವನ್ನಪ್ಪಿದ ಯುವಕ.
ಈತ ಬುಧವಾರ ನಡೆದ ಕಂಬಳಕ್ಕಾಗಿ ಬಂದಿದ್ದು ರಾತ್ರಿಯೂ ಕಂಬಳದಲ್ಲಿ ಭಾಗಿಯಾಗಿದ್ದನು. ಆದರೆ ಗುರುವಾರ ಮುಂಜಾನೆ ಮನೆಗೂ ಬಾರದೆ ನಾಪತ್ತೆಯಾಗಿದ್ದನು. ಇದರಿಂದ ಹೆದರಿದ ಮನೆಯವರು ಎಲ್ಲರಲ್ಲಿ ವಿಚಾರಿಸಿದ್ದರು. ಆದರೆ ಕಂಬಳ ನಡೆದ ಪ್ರದೇಶದ ಒಂದು ತೆರೆದ ಬಾವಿಯಲ್ಲಿ ಲೋಹಿತ್ ಶವವಾಗಿ ಪತ್ತೆಯಾಗಿದ್ದಾನೆ.
ರೋಹಿತ್ ಅವರ ಮೃತದೇಹ ಒಂಟಿಕಟ್ಟೆಯಿಂದ ಸುಮಾರು ಮುಕ್ಕಾಲು ಕಿ.ಮೀ ದೂರದಲ್ಲಿನ ಎನಿಕ್ರಿಪಲ್ಲ ಎಂಬಲ್ಲಿರುವ ಆವರಣದ ಬಾವಿಯಲ್ಲಿ ಪತ್ತೆಯಾಗಿದ್ದು, ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ ಎಂದು ತಿಳಿದು ಬಂದಿದೆ.
ಸದ್ಯ ಮೂಡಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿ ಕೊಲೆಯಾಗಿರಬಹುದು ಎಂದು ಶಂಕಿಸಿ, ತನಿಖೆ ಆರಂಭಿಸಿದ್ದಾರೆ.
ಘಟನೆಯ ಬಗ್ಗೆ ಮೃತನ ಸಹೋದರ ನಿಶ್ಚಿತ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…