Featured

ಮೂಡಿಗೆರೆ: ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ ;  ಪ್ರಕರಣ ಸುಖಾಂತ್ಯ – Vishwanews24

ಮೂಡಿಗೆರೆ: ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ ;  ಪ್ರಕರಣ ಸುಖಾಂತ್ಯ

ಮೂಡಿಗೆರೆ: ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳ ರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಗೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಏನಿದು ಘಟನೆ:
ಭಾನುವಾರ ಮುಂಜಾನೆ ಯುವಕರ ತಂಡವೊಂದು ಭಂಡಾಜೆ ಫಾಲ್ಸ್ ನೋಡಲು ತಂಡ ಹೊರಟಿತ್ತು ಅದರಂತೆ ತಂಡದ ಸದಸ್ಯರು ಚಾರಣ ಕೈಗೊಂಡು ಹಿಂತಿರುಗುವ ವೇಳೆ ತಂಡದಲ್ಲಿ ಓರ್ವನಾದ ಧನುಷ್ ಎಂಬಾತ ನಾಪತ್ತೆಯಾಗಿದ್ದ ಇದರಿಂದ ಗಾಬರಿಗೊಂಡ ಜೊತೆಗಿದ್ದ ಯುವಕರು ಆತನ ಮೊಬೈಲ್ ಗೆ ಕರೆ ಮಾಡಿದರೆ ನೆಟ್ ವರ್ಕ್ ಇರಲಿಲ್ಲ ಕೂಡಲೇ ಯುವಕರು ನಡೆದುಕೊಂಡು ಸುಂಕ ಸಾಲೆ ಗ್ರಾಮಕ್ಕೆ ಬಂದು ಅಲ್ಲಿಂದ ಆತನ ಮೊಬೈಲ್ ಗೆ ಕರೆ ಮಾಡಿದರೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಬಳಿಕ ಎಚ್ಚೆತ್ತ ಯುವಕರು ಕೂಡಲೇ 112 ಗೆ ಕರೆ ಮಾಡಿ ಯುವಕ ನಾಪತ್ತೆಯಾಗಿರುವ ವಿಚಾರ ಪೊಲೀಸರೀಗೆ ತಿಳಿಸಿದ್ದಾರೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡ ಧನುಷ್ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅದರಂತೆ ಧನುಷ್ ನಾಪತ್ತೆಯಾದ ಸ್ಥಳದಿಂದ ಪೊಲೀಸರು ಮೂರೂ ತಂಡ ರಚಿಸಿ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ ಬರೋಬ್ಬರಿ ಮೂರೂ ಗಂಟೆ ಮೂವತ್ತು ನಿಮಿಷಗಳ ಕಾರ್ಯಾಚರಣೆ ಬಳಿಕ ಧನುಷ್ ದಟ್ಟ ಕಾಡಿನ ನಡುವೆ ಪತ್ತೆಯಾಗಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಧನುಷ್ ನಾಪತ್ತೆಯಾದ ಸ್ಥಳದಿಂದ ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ ಕಾಡಿನ ನಡುವೆ ಹುಡುಕಾಟ ನಡೆಸಿದ ನಮಗೆ ಸುಮಾರು ಮೂರುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಪ್ರದೇಶದ ಮದ್ಯದಲ್ಲಿ ಒಬ್ಬನೇ ನಿಂತಿರುವುದು ಕಂಡು ಬಂದಿದೆ ಕೂಡಲೇ ನಮ್ಮ ತಂಡ ಆತನ ಬಳಿಗೆ ಹೋಗುತ್ತಿದ್ದಂತೆ ಗಾಬರಿಗೊಂಡಿದ್ದ ಯುವಕ ನಮ್ಮನ್ನು ನೋಡಿ ನಮ್ಮತ್ತ ಓಡಿ ಬಂದಿದ್ದಾನೆ ಬಳಿಕ ವಿಚಾರಿಸಿದ ವೇಳೆ ಆತನೇ ಎಂಬುದು ದೃಢವಾಗಿದ್ದು ಬಳಿಕ ಗಾಬರಿಗೊಂಡಿದ್ದ ಆತನನ್ನು ಸಂತೈಸಿ ಬಳಿಕ ಯುವರನ್ನು ಕೊಟ್ಟಿಗೆಹಾರಕ್ಕೆ ಕರೆದುಕೊಂಡು ಬಂದು ಬಳಿಕ ಪೋಷಕರಿಗೆ ಕರೆ ಮಾಡಿ ಮಾತನಾಡಿಸಿ ಆ ಬಳಿಕ ಮಂಗಳೂರಿಗೆ ಕಳುಹಿಸಿಕೊಡಲಾಯಿತು ಎಂದು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಜೊತೆಗಿದ್ದರು.

Vishwa News 24

Recent Posts

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

26 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago