ಮೂಡುಬಿದಿರೆ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಖಾಸಗಿ ಬಸ್ಬೈಕ್ಗೆ ಸೋಮವಾರ ಸಾಯಂಕಾಲ ಢಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲರ್ಸ್ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ (19) ಮೃತಪಟ್ಟವರು.
ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು.
ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಅಮಾಯಕ ಜೀವ ಬಲಿಯಾಗಿದೆ. ಮೂಡುಬಿದಿರೆ ಪೊಲೀಸರು ಬಸ್ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…