ಮಂಗಳೂರು: ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ.
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಆಳ್ವಾಸ್ ವಿರಾಸತ್ ಮತ್ತು ನುಡಿಹಬ್ಬವಾದ ಆಳ್ವಾಸ್ ನುಡಿಸಿರಿ ಪ್ರತಿ ವರ್ಷ ಲಕ್ಷಾಂತರ ಮಂದಿ ಈ ವೈಭವವನ್ನು ಕಣ್ತುಂಬಿಕೊಳ್ಳಲು ನಿರೀಕ್ಷೆಯಿಂದ ಕಾಯುತ್ತಿದ್ದರು. ಆದರೆ ಕೊರೊನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಈ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಈ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ 2021ರ ಡಿಸೆಂಬರ್ 31ರಂದು ಆಳ್ವಾಸ್ ವಿರಾಸತ್ ಮತ್ತು ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಉದ್ಘಾಟನೆಗೊಂಡು, 2022ರ ಜ.2ರವರೆಗೆ ಮುಂದುವರಿಯಲಿದೆ. ಹಗಲಿನ ಹೊತ್ತು ವಿದ್ಯಾಗಿರಿಯಲ್ಲಿ ನುಡಿಸಿರಿ ನಡೆದರೆ, ಸಂಜೆ ವೇಳೆ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ವೈಭವಿಸಲಿದೆ.
ವಿರಾಸತ್ ಮತ್ತು ನುಡಿಸಿರಿ ಶೈಲಿಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಕೋವಿಡ್ ಮಾರ್ಗಸೂಚಿ ಈಗಲೂ ಜಾರಿಯಾಗಿರುವ ಕಾರಣ ಇಡೀ ಕಾರ್ಯಕ್ರಮವನ್ನು ವೈಭವಕ್ಕೆ ವಿಶೇಷ ಆದ್ಯತೆ ನೀಡಿದರೆ, ಅರ್ಥಪೂರ್ಣವಾಗಿ ಮಾಡಲು ನಿರ್ಧರಿಸಲಾಗಿದೆ. ನುಡಿಸಿರಿ ಮತ್ತು ವಿರಾಸತ್ ಬಗ್ಗೆ ಆಸಕ್ತಿಯಿರುವವರು ಮಾತ್ರ ಬರಬೇಕೆಂಬುದು ನಮ್ಮ ನಿರೀಕ್ಷೆ. ನುಡಿಸಿರಿ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ 3 ಸಾವಿರ ಮಂದಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದ್ದು, ವಿರಾಸತ್ ಪುತ್ತಿಗೆಯಲ್ಲಿ ನಡೆಯುವ ಕಾರಣ ಯಾವುದೇ ನಿಬಂಧನೆಗಳನ್ನು ಹಾಕುತ್ತಿಲ್ಲ ಎನ್ನುತ್ತಾರೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…