ಮೂಡುಬಿದಿರೆ: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೂಡುಬಿದಿರೆಯ ಅಲಂಗಾರುವಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ.
ಬೆಳಗ್ಗೆ 4 ಗಂಟೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದು, ವಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರಿ ಪ್ರಮಾಣ ಮಾಂಸ, ದನದ ತಲೆಯ ಭಾಗಗಳು ಪತ್ತೆಯಾಗಿವೆ.
ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಕೆ.ಜಿ.ಗಟ್ಟಲೆ ಮಾಂಸ ಸಹಿತ ಕ್ಲಾರಿನ್ ಅಲ್ವಿನ್ ಮತ್ತು ಗಿಲ್ಬರ್ಟ್ ಮಿರಂದ ಎಂಬ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
ಘಟನೆ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…