Featured

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ

ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶದ್ವಾರದ ಬಳಿ ಗರಡಿ ಕಡೆಯಿಂದ ಬರುತ್ತಿದ್ದ ವ್ಯಾಗನ್-ಆರ್ ಕಾರು ಮತ್ತು ಅದನ್ನು ಹಿಂಬಾಲಿಸುತ್ತಿದ್ದ ಪಿಕಪ್ ವಾಹನವನ್ನು ತಡೆಯಲು ಸಂಕೇತ ನೀಡಿದರು. ಆದರೆ, ವಾಹನಗಳು ನಿಲ್ಲಿಸದೆ ಮುನ್ನುಗ್ಗಿದಾಗ ಪೊಲೀಸರು ಬೆನ್ನಟ್ಟಿ ಅವುಗಳನ್ನು ತಡೆದಿದ್ದಾರೆ.

ಇದನ್ನೂ ಓದಿ:

ಪೊಲೀಸರು ವಾಹನವನ್ನು ಸುತ್ತುವರಿಯುತ್ತಿದ್ದಂತೆಯೇ, ಪಿಕಪ್ ಚಾಲಕ ಹರ್ಷದ್ ಮತ್ತು ಆತನೊಂದಿಗಿದ್ದ ಇತರರು ಸ್ಥಳದಿಂದ ಓಡಿಹೋಗಿದ್ದಾರೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ (ಎಸ್ಕಾರ್ಟ್) ಬಂದಿದ್ದ ವ್ಯಾಗನ್-ಆರ್ ಕಾರಿನ ಚಾಲಕ ಸಫರ್ ಹಾಗೂ ಹಂಡೇಲು ನಿವಾಸಿ ಅಬೂಬಕರ್ ಕೂಡ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಅದರಲ್ಲಿ ಎರಡು ಹಸುಗಳು, ಎರಡು ಎತ್ತುಗಳು ಮತ್ತು ನಾಲ್ಕು ಗಂಡು ಕರುಗಳನ್ನು ಕಾಲು ಮತ್ತು ಕುತ್ತಿಗೆಗೆ ಹಗ್ಗದಿಂದ ಬಿಗಿದು ಅತ್ಯಂತ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ಸದ್ಯ ಪೊಲೀಸರು ಈ ಎಲ್ಲಾ ಜಾನುವಾರುಗಳನ್ನು ರಕ್ಷಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago