Featured

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ

ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶದ್ವಾರದ ಬಳಿ ಗರಡಿ ಕಡೆಯಿಂದ ಬರುತ್ತಿದ್ದ ವ್ಯಾಗನ್-ಆರ್ ಕಾರು ಮತ್ತು ಅದನ್ನು ಹಿಂಬಾಲಿಸುತ್ತಿದ್ದ ಪಿಕಪ್ ವಾಹನವನ್ನು ತಡೆಯಲು ಸಂಕೇತ ನೀಡಿದರು. ಆದರೆ, ವಾಹನಗಳು ನಿಲ್ಲಿಸದೆ ಮುನ್ನುಗ್ಗಿದಾಗ ಪೊಲೀಸರು ಬೆನ್ನಟ್ಟಿ ಅವುಗಳನ್ನು ತಡೆದಿದ್ದಾರೆ.

ಇದನ್ನೂ ಓದಿ:

ಪೊಲೀಸರು ವಾಹನವನ್ನು ಸುತ್ತುವರಿಯುತ್ತಿದ್ದಂತೆಯೇ, ಪಿಕಪ್ ಚಾಲಕ ಹರ್ಷದ್ ಮತ್ತು ಆತನೊಂದಿಗಿದ್ದ ಇತರರು ಸ್ಥಳದಿಂದ ಓಡಿಹೋಗಿದ್ದಾರೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ (ಎಸ್ಕಾರ್ಟ್) ಬಂದಿದ್ದ ವ್ಯಾಗನ್-ಆರ್ ಕಾರಿನ ಚಾಲಕ ಸಫರ್ ಹಾಗೂ ಹಂಡೇಲು ನಿವಾಸಿ ಅಬೂಬಕರ್ ಕೂಡ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಅದರಲ್ಲಿ ಎರಡು ಹಸುಗಳು, ಎರಡು ಎತ್ತುಗಳು ಮತ್ತು ನಾಲ್ಕು ಗಂಡು ಕರುಗಳನ್ನು ಕಾಲು ಮತ್ತು ಕುತ್ತಿಗೆಗೆ ಹಗ್ಗದಿಂದ ಬಿಗಿದು ಅತ್ಯಂತ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ಸದ್ಯ ಪೊಲೀಸರು ಈ ಎಲ್ಲಾ ಜಾನುವಾರುಗಳನ್ನು ರಕ್ಷಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago