Featured

ಮೂಡುಬಿದಿರೆ: ಅಪಘಾತದಲ್ಲಿ ವಿದ್ಯಾರ್ಥಿಯ ಸಾವು ; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ – Vishwanews24

ಮೂಡುಬಿದಿರೆ: ಅಪಘಾತದಲ್ಲಿ ವಿದ್ಯಾರ್ಥಿಯ ಸಾವು ; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಸೋಮವಾರ ಸಂಜೆ ರಾ.ಹೆ. 169 ಹಾದುಹೋಗುವ ತೋಡಾರ್‌ನ ಹಂಡೇಲು ಬಳಿ ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದು ಆಳ್ವಾಸ್‌ ಕಾಲೇಜು ವಿದ್ಯಾರ್ಥಿ ಕಾರ್ತಿಕ್‌ ಆಚಾರ್ಯ ಮೃತಪಟ್ಟ ಘಟನೆಗೆ ಪ್ರತಿಯಾಗಿ, ಚಾಲಕನ ನಿರ್ಲಕ್ಷ್ಯವನ್ನು ಖಂಡಿಸಿ ಮುಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಸಂಜೆ ವಿದ್ಯಾಗಿರಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.

ವರುಷದಲ್ಲಿ ಹತ್ತಕ್ಕೂ ಅಧಿಕ ಬಲಿ:
ಖಾಸಗಿ ಬಸ್‌ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ.

ನಿರ್ಲಕ್ಷ್ಯತನದಿಂದ ಬಸ್‌ ಚಲಾಯಿಸುವವರ ವಿರುದ್ದ ಕಠಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ತಿಕ್‌ ಆಚಾರ್ಯ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಕೀಲ ಶಾಂತಿಪ್ರಸಾದ್‌ ಹೆಗ್ಡೆ ಆಗ್ರಹಿಸಿದರು.

ಮನವಿ:
ಮೂಡುಬಿದಿರೆ ವಲಯದ ಎಲ್ಲ ಬಸ್‌ ಚಾಲಕರು ಕಟ್ಟು ನಿಟ್ಟಾಗಿ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಿಶೇಷ ಜನಸಂಚಾರವಿರುವ ಪ್ರದೇಶಗಳಲ್ಲಿ ವೇಗಕ್ಕೆ ಕಡಿವಾಣ ಹಾಕಬೇಕು. ಆಳ್ವಾಸ್‌ – ವಿದ್ಯಾಗಿರಿ ಬಳಿ ಹೆದ್ದಾರಿಗೆ ಹಂಪ್ಸ್‌ ಹಾಕಬೇಕು. ಶಾಲಾ ಕಾಲೇಜುಗಳ ಬಳಿ ಡಿವೈಡರ್‌ಗಳನ್ನು ಅಳವಡಿಸಿ ಬಸ್ಸುಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿಯನ್ನು ವಿದ್ಯಾರ್ಥಿಗಳು ಪೋಲೀಸ್‌ ವೃತ್ತ ನಿರೀಕ್ಷಕ ನಿರಂಜನ್‌ ಅವರಿಗೆ ನೀಡಿದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳ ಗಮನಸೆಳೆದು ಸೂಕ್ತ ಕ್ರಮ ಜರಗಿಸುವುದಾಗಿ ನಿರಂಜನ್‌ ಭರವಸೆ ಇತ್ತರು. ರಸ್ತೆ ನಿಯಮ ಪಾಲಿಸದ, ಆತಿವೇಗದಲ್ಲಿ ವಾಹನ ಚಲಾಯಿಸುವ ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಗಿ ಕಳೆದೊಂದು ವರ್ಷದಿಂದ ನೂರೈವತ್ತಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಜರಗಿಸಲಾಗಿದೆ ಎಂದು ನಿರಂಜನ್‌ ತಿಳಿಸಿದರು.

ಸಂಜೆ ಗಂ.4ರಿಂದ 4.30ರ ವರೆಗೆ ವಿದ್ಯಾಗಿರಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾಯಿಸಿದ್ದು ಪೊಲೀಸರು ಇರುವ ಸ್ಥಳಾವಕಾಶದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲು ಬಹಳ ಶ್ರಮಪಟ್ಟರು. ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಬುಧವಾರ ಎಡಪದವಿನಲ್ಲಿ ಪ್ರತಿಭಟನೆ
ಖಾಸಗಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ಕಾರ್ತಿಕ್‌ ಸಾವಿನ ಘಟನೆಯನ್ನು ಖಂಡಿಸಿ ಎಡಪದವು – ಮಿಜಾರು ಪರಿಸರದ ನಾಗರಿಕರಿಂದ ಜೂನ್‌ 7 ರಂದು ಬೆಳಿಗ್ಗೆ 8.30 ಕ್ಕೆ ಎಡಪದವು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago