Featured

ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ – vishwanews24

ಮೂಡುಬಿದಿರೆ : ಆ.1 ಮತ್ತು  2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 15ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2025 ಕಾರ್ಯಕ್ರಮ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ ನಡೆಯಲಿದೆ.

ಆಳ್ವಾಸ್ ನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ರ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸುಗಳನ್ನು 20250 ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವೀ ಅಭ್ಯರ್ಥಿಗಳು ಕೂಡಾ ಭಾಗವಹಿಸ ಬಹುದಾಗಿದೆ ಎಂದರು. ಈಗಾಗಲೇ 285 ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಇದರಲ್ಲಿ 15950 ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇರಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ತರಬೇತಿ ಮತ್ತು ನಿಯೋಜನೆ ವಿಭಾಗದ ಮುಖ್ಯಸ್ಥರಾದ ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago