ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 15ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2025 ಕಾರ್ಯಕ್ರಮ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಆಳ್ವಾಸ್ ನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ರ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸುಗಳನ್ನು 20250 ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವೀ ಅಭ್ಯರ್ಥಿಗಳು ಕೂಡಾ ಭಾಗವಹಿಸ ಬಹುದಾಗಿದೆ ಎಂದರು. ಈಗಾಗಲೇ 285 ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಇದರಲ್ಲಿ 15950 ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇರಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ತರಬೇತಿ ಮತ್ತು ನಿಯೋಜನೆ ವಿಭಾಗದ ಮುಖ್ಯಸ್ಥರಾದ ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…