Featured

ಮೂಡುಬಿದಿರೆ : ಕನ್ನಡದ ಬಾವುಟದೊಂದಿಗೆ ಮರಳಿನಲ್ಲಿ ಅರಳಿದ ಪುನೀತ್ ಭಾವಚಿತ್ರ – Vishwanews24

ಮೂಡುಬಿದಿರೆ: ಮರಳಿನಲ್ಲಿ ಕನ್ನಡದ ಬಾವುಟದೊಂದಿಗೆ ಅರಳಿದ ಪುನೀತ್  ಭಾವಚಿತ್ರ – Vishwanews24

ಮೂಡುಬಿದಿರೆ: ಆಳ್ವಾಸ್‌ ಕಾಲೇಜಿನ ವಿಶುವಲ್‌ ಆರ್ಟ್‌ ಪದವಿ ವಿಭಾಗದ ಹಿರಿಯ ವಿದ್ಯಾರ್ಥಿ, ಹೊಸ ಬಗೆಯ ಕಲಾಕೃತಿಗಳನ್ನು ರಚಿಸಿ ಈಗಾಗಲೇ 3 ವಿಶ್ವದಾಖಲೆಗಳನ್ನು ನಿರ್ಮಿಸಿರುವ ತಿಲಕ್‌ ಕುಲಾಲ್‌ ಹಾಗೂ ಕಲಾವಿದರಾದ ರೋಹಿತ್‌ ನಾಯಕ್‌, ಅಕ್ಷಿತ್‌ ಕುಲಾಲ್‌ ಅವರು ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್‌ ವೇದಿಕೆಯಲ್ಲಿ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ 30 ಅಡಿ ಉದ್ದ , 30 ಅಡಿ ಅಗಲದ ಕಲಾಕೃತಿಯನ್ನು ರಚಿಸಿದ್ದಾರೆ.

ಸುಮಾರು 3 ಗಂಟೆ ಸಮಯದಲ್ಲಿ 80 ಕೆಜಿ ಇದ್ದಿಲು, 90 ಕೆಜಿ ಮರಳು, ರಂಗೋಲಿ ಹುಡಿಯ ಬಳಕೆಯೊಂದಿಗೆ ಈ ಕಲಾಕೃತಿ ಮೂಡಿಬಂದಿದೆ. ಕನ್ನಡದ ಮಹತ್ವ ಸಾರುವ ಹಳದಿ ಕೆಂಪು ಬಣ್ಣದ ಬಾವುಟವನ್ನು ಚಿತ್ರಿಸಿರುವುದು ಗಮನಾರ್ಹವಾಗಿದೆ.

ಶುಕ್ರವಾರದಿಂದ 3 ದಿನಗಳ ಕಾಲ ಈ ಕಲಾಕೃತಿಯನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗಿದೆ. ಆಳ್ವಾಸ್‌ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್‌ ಆಳ್ವ ಪೂರಕ ಸಹಕಾರ ನೀಡಿದ್ದು, ಮೂಡುಬಿದಿರೆ ಪೋಲಿಸ್‌ ಸಬ್‌ ಇನ್‌ಸ್ಪೆಕ್ಟರ್‌ ಸುದೀಪ್‌ ಕಲಾಕೃತಿಯನ್ನು ವೀಕ್ಷಿಸಿ ಶ್ಲಾಘಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago