ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಶುವಲ್ ಆರ್ಟ್ ಪದವಿ ವಿಭಾಗದ ಹಿರಿಯ ವಿದ್ಯಾರ್ಥಿ, ಹೊಸ ಬಗೆಯ ಕಲಾಕೃತಿಗಳನ್ನು ರಚಿಸಿ ಈಗಾಗಲೇ 3 ವಿಶ್ವದಾಖಲೆಗಳನ್ನು ನಿರ್ಮಿಸಿರುವ ತಿಲಕ್ ಕುಲಾಲ್ ಹಾಗೂ ಕಲಾವಿದರಾದ ರೋಹಿತ್ ನಾಯಕ್, ಅಕ್ಷಿತ್ ಕುಲಾಲ್ ಅವರು ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 30 ಅಡಿ ಉದ್ದ , 30 ಅಡಿ ಅಗಲದ ಕಲಾಕೃತಿಯನ್ನು ರಚಿಸಿದ್ದಾರೆ.
ಸುಮಾರು 3 ಗಂಟೆ ಸಮಯದಲ್ಲಿ 80 ಕೆಜಿ ಇದ್ದಿಲು, 90 ಕೆಜಿ ಮರಳು, ರಂಗೋಲಿ ಹುಡಿಯ ಬಳಕೆಯೊಂದಿಗೆ ಈ ಕಲಾಕೃತಿ ಮೂಡಿಬಂದಿದೆ. ಕನ್ನಡದ ಮಹತ್ವ ಸಾರುವ ಹಳದಿ ಕೆಂಪು ಬಣ್ಣದ ಬಾವುಟವನ್ನು ಚಿತ್ರಿಸಿರುವುದು ಗಮನಾರ್ಹವಾಗಿದೆ.
ಶುಕ್ರವಾರದಿಂದ 3 ದಿನಗಳ ಕಾಲ ಈ ಕಲಾಕೃತಿಯನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗಿದೆ. ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಪೂರಕ ಸಹಕಾರ ನೀಡಿದ್ದು, ಮೂಡುಬಿದಿರೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಸುದೀಪ್ ಕಲಾಕೃತಿಯನ್ನು ವೀಕ್ಷಿಸಿ ಶ್ಲಾಘಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…