ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಶುವಲ್ ಆರ್ಟ್ ಪದವಿ ವಿಭಾಗದ ಹಿರಿಯ ವಿದ್ಯಾರ್ಥಿ, ಹೊಸ ಬಗೆಯ ಕಲಾಕೃತಿಗಳನ್ನು ರಚಿಸಿ ಈಗಾಗಲೇ 3 ವಿಶ್ವದಾಖಲೆಗಳನ್ನು ನಿರ್ಮಿಸಿರುವ ತಿಲಕ್ ಕುಲಾಲ್ ಹಾಗೂ ಕಲಾವಿದರಾದ ರೋಹಿತ್ ನಾಯಕ್, ಅಕ್ಷಿತ್ ಕುಲಾಲ್ ಅವರು ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 30 ಅಡಿ ಉದ್ದ , 30 ಅಡಿ ಅಗಲದ ಕಲಾಕೃತಿಯನ್ನು ರಚಿಸಿದ್ದಾರೆ.
ಸುಮಾರು 3 ಗಂಟೆ ಸಮಯದಲ್ಲಿ 80 ಕೆಜಿ ಇದ್ದಿಲು, 90 ಕೆಜಿ ಮರಳು, ರಂಗೋಲಿ ಹುಡಿಯ ಬಳಕೆಯೊಂದಿಗೆ ಈ ಕಲಾಕೃತಿ ಮೂಡಿಬಂದಿದೆ. ಕನ್ನಡದ ಮಹತ್ವ ಸಾರುವ ಹಳದಿ ಕೆಂಪು ಬಣ್ಣದ ಬಾವುಟವನ್ನು ಚಿತ್ರಿಸಿರುವುದು ಗಮನಾರ್ಹವಾಗಿದೆ.
ಶುಕ್ರವಾರದಿಂದ 3 ದಿನಗಳ ಕಾಲ ಈ ಕಲಾಕೃತಿಯನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇರಿಸಲಾಗಿದೆ. ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಪೂರಕ ಸಹಕಾರ ನೀಡಿದ್ದು, ಮೂಡುಬಿದಿರೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಸುದೀಪ್ ಕಲಾಕೃತಿಯನ್ನು ವೀಕ್ಷಿಸಿ ಶ್ಲಾಘಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…