ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಎಂದು ಗುರುತಿಸಲಾಗಿದೆ.
ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…