ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಎಂದು ಗುರುತಿಸಲಾಗಿದೆ.
ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…