Featured

ಮೂಡುಬಿದಿರೆ: ಕೋಮು ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಸಚಿವ ಈಶ್ವರಪ್ಪರಿಂದ ರಾಜ್ಯದಲ್ಲಿ ಅಶಾಂತಿ ಸೃಷ್ಟಿ : ಎಸ್‌ ಡಿಪಿಐ – Vishwanews24

ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಸಭೆ..

ದೇಶ ವಿರೋಧಿಗಳ ವಿರುದ್ಧ ಮುಂದಿನ ಚುನಾವಣೆಯಲ್ಲಿ ಹೋರಾಟ ನಡೆಸಿ ತಕ್ಕ ಪಾಠ ಕಲಿಸುತ್ತೇವೆ..

ಮುಂದಿನ ಚುನಾವಣೆಯಲ್ಲಿ ನಿಮಗೆ ಎಸ್‌ಡಿಪಿಐ ದೊಡ್ಡ ತಡೆ ಒಡ್ಡಲಿದೆ..

ಮೂಡುಬಿದಿರೆ: ಸಚಿವ ಕೆ.ಎಸ್.‌ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಮೂಡುಬಿದಿರೆಯಲ್ಲಿ  ಪ್ರತಿಭಟನೆ ಸಭೆ ನಡೆಯಿತು.

ಮೂಡುಬಿದಿರೆ ವಿಧಾನಸಭೆ ಕ್ಷೇತ್ರ ಎಸ್‌ಡಿಪಿಐ ಅಧ್ಯಕ್ಷ ಆಸಿಫ್ ಕೋಟೆಬಾಗಿಲು ಮಾತನಾಡಿ, ಕೋಮು ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಸಚಿವ ಈಶ್ವರಪ್ಪರಿಂದ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಗೂಂಡಾಗಳನ್ನು ಬಳಸಿಕೊಂಡು ಹರ್ಷನನ್ನು ಕೊಲೆ ಮಾಡಿಸಿದ್ದೀರಿ. ನಿಮ್ಮ ಫ್ಯಾಸಿಸ್ಟ್ ಸಿದ್ಧಾಂತ ಮುಂದುವರಿಸಲು ನಾವು ಬಿಡುವುದಿಲ್ಲ. ನಿಮ್ಮಂತಹ ದೇಶ ವಿರೋಧಿಗಳ ವಿರುದ್ಧ ಮುಂದಿನ ಚುನಾವಣೆಯಲ್ಲಿ ಹೋರಾಟ ನಡೆಸಿ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಹಿಜಾಬ್ ಬಗ್ಗೆ ವಿಧಾನಸಭೆಯಲ್ಲಿ ಬಲವಾಗಿ ಧ್ವನಿ ಎತ್ತದ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಅಂತಾಕ್ಷರಿ ಹಾಡಿ ಸಮಯ ಕಳೆಯುತ್ತಿದ್ದಾರೆ. ನಿಮ್ಮಂತವರು ಜನಪ್ರತಿನಿಧಿಯಾಗಲು ನಾಲಾಯಕ್. ಡಿಕೆಶಿ ಅವರು ಈಶ್ವರಪ್ಪ ಹೆಗಲಿಗೆ ಕೈಹಾಕಿ ಸುತ್ತಾಡುತ್ತಿದ್ದಾರೆ.

ಮುಸ್ಲಿಮರ ಬೆಂಬಲ ಇಲ್ಲದೆ ನಿಮಗೆ ಚುನಾವಣೆ ಗೆಲ್ಲಲು ಅಸಾಧ್ಯ ಎಂದು ಗೊತ್ತಿದ್ದೂ ಈ ರೀತಿ ಮಾಡುತ್ತಿದ್ದೀರಿ. ಮುಂದಿನ ಚುನಾವಣೆಯಲ್ಲಿ ನಿಮಗೆ ಎಸ್‌ಡಿಪಿಐ ದೊಡ್ಡ ತಡೆ ಒಡ್ಡಲಿದೆ ಎಂದು ಎಚ್ಚರಿಸಿದರು. ಮಂಗಳೂರು ಉತ್ತರ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಆಸಿಫ್ ತೋಡಾರು, ನಿಸಾರ್ ಮಾರೂರು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago