ಮೂಡುಬಿದಿರೆ: ಟ್ರ್ಯಾಕ್ಟರ್ ತೊಳೆಯುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಸಹಿತ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಒಂಬೆಟ್ಟು ನಿವಾಸಿ ರಾಜೇಶ್ (38) ಎಂದು ಗುರುತಿಸಲಾಗಿದೆ.
ರಾಜೇಶ್ ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರಿಗೆ ಸೇರಿದ ಟ್ರ್ಯಾಕ್ಟರ್ ಅನ್ನು ಬಾವಿಯ ಸಮೀಪ ನಿಲ್ಲಿಸಿ ತೊಳೆಯುತ್ತಿದ್ದರು. ಈ ಸಂದರ್ಭ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿದೆ. ಅದನ್ನು ತಡೆದು ನಿಲ್ಲಿಸಲು ಮುಂದಾದ ರಾಜೇಶ್ ಕೂಡಾ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಜೊತೆ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…