Featured

ಮೂಡುಬಿದಿರೆ: ಡಿ.10ರಿಂದ 15ರವರೆಗೆ 30ನೇ ವರ್ಷದ ‘ಆಳ್ವಾಸ್ ವಿರಾಸತ್’ – vishwanews24

ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್‌ಗೆ ವಿರಾಸತ್-24 ಪ್ರಶಸ್ತಿ ಪ್ರದಾನ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಡಿ.10ರಿಂದ 15ರವರೆಗೆ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ.

30ನೇ ವರ್ಷದ ಆಳ್ವಾಸ್ ವಿರಾಸತ್ ನಲ್ಲಿ ವಿಶೇಷ ಆಕರ್ಷಣೆಯಾಗಿ, ಕೈಮಗ್ಗ ಸೀರೆಗಳ ಉತ್ಸವವನ್ನು ಆಯೋಜಿಸಲಾಗಿದೆ. ಭಾರತದ 30 ಪ್ರದೇಶವಾರು ಹಾಗೂ ಜಿಐ ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆಗಳ ಹಾಗೂ ಬಟ್ಟೆಗಳ ಉತ್ಸವ ವಿರಾಸತ್ ನಲ್ಲಿರಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ.

ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ನೇ ಸಾಲಿನ ಆಳ್ವಾಸ್ ವಿರಾಸತ್ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ವೆಂಕಟೇಶ್ ಕುಮಾರ್ ರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಭಾರತೀಯ ಪರಂಪರೆಯನ್ನು ಬಿಂಬಿಸುವ ಕಾಶ್ಮೀರದಿಂದ ಕನ್ಯಾಕುಮಾರರಿರೆಗಿನ ನೇಕಾರರಿಂದ ಗ್ರಾಹಕರಿಗೆ ನೇರ ಮಾರಾಟವೂ ನಡೆಯಲಿದ್ದು, ಉಡುಪಿ, ಇಳಕಲ್, ಕೋಲ್ಕತ್ತಾ, ತುಮ್ಮಿನಕಟ್ಟೆ, ವೆಂಕಟಗಿರಿ, ಕಾಶ್ಮೀರಿ, ಕಾಂಚೀವರಂ, ಮೈಸೂರು, ಕೊಳ್ಳೇಗಾಲ, ದಾವಣಗೆರೆ, ಚೆಟ್ಟಿನಾಡ್, ಕೇರಳ, ಹೈದರಾಬಾದ್, ಮದ್ರಾಸ್ ನ ಸೀರೆಗಳು ಮತ್ತು ಬಟ್ಟೆಗಳು ಈ ಮೇಳದಲ್ಲಿರಲಿವೆ. ಉಡುಪಿಯ ಪದ್ಮಶಾಲಿ ನೇಕಾರರ ಪ್ರತಿಷ್ಠಾನದ ಸಹಕಾರದೊಂದಿಗೆ ಈ ಉತ್ಸವ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಡಿ. 10ರ ಸಂಜೆ 5:30ರಿಂದ 6:30ರವರೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟನೆ ನೆರವೇರಿಸುವರು. ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸುವರು ಎಂದು ಅವರು ಹೇಳಿದರು.

ಸಂಜೆ 6:35ರಿಂದ 8:30ರವರೆಗೆ 100ಕ್ಕೂ ಅಧಿಕ ದೇಶಿಯ ಜಾನಪದ ಕಲಾ ತಂಡಗಳಿಂದ ಕೂಡಿದ 3000ಕ್ಕೂ ಅಧಿಕ ಕಲಾವಿದರನ್ನು ಒಳಗೊಂಡ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ರಾತ್ರಿ 8:30ರಿಂದ 9:30ರವರೆಗೆ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ರಥ ಸಂಚಲನ ಹಾಗೂ ರಥಾರತಿ ನಡೆಯಲಿದೆ.

ಡಿ.11ರಂದು ಸಂಜೆ 5:45ರಿಂದ 6:30ರವರೆಗೆ ಆಳ್ವಾಸ್ ವಿರಾಸತ್ 2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 6:35ರಿಂದ 7:30ರವರೆಗೆ ಹಿಂದೂಸ್ಥಾನಿ ಗಾಯನ, ಬಳಿಕ 7.45ರಿಂದ 9ರವರೆಗೆ ಗುಜರಾತ್ ನ ರಂಗ್ ಮಲಹರ್ ದಿ. ಫೋಕ್ ಆರ್ಟ್ಸ್ ತಂಡದಿಂದ ಗುಜರಾತಿ ಜಾನಪದ ನೃತ್ಯ ಪ್ರದರ್ಶನ ನಡೆಯಲಿದೆ. 9 ಗಂಟೆಯಿಂದ ಆಳ್ವಾಸ್ ವೈವಿಧ್ಯಮಯ ಸಾಂಸ್ಕೃತಿಕ ವೈಭವ ನಡೆಯಲಿದೆ.

ಡಿ.12ರಂದು ಸಂಜೆ 6ರಿಂದ 8ರವರೆಗೆ ಗುಜರಾತ್ ನ ಒಸ್ಮಾನ್ ಮೀರ್ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8.15ರಿಂದ ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 9:15ರಿಂದ ಆಳ್ವಾಸ್ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಪ್ರಸ್ತುತಗೊಳ್ಳಲಿದೆ.

ಡಿ.13ರಂದು ಸಂಜೆ 6ರಿಂದ 8ರವರೆಗೆ ನೀಲಾದ್ರಿ ಕುಮಾರ್ ಮತ್ತು ತಂಡದಿಂದ ‘ಸೌಂಡ್ ಆಫ್ ಇಂಡಿಯಾ’ ಹಾಗೂ 8.15ರಿಂದ 9ರವರೆಗೆ ಕೋಲ್ಕತ್ತಾದ ಆಶೀಮ್ ಬಂಧು ಭಟ್ಟಾಚಾರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ. ರಾತ್ರಿ 9ರಿಂದ ಬೆಂಗಳೂರು ಕಾರ್ತೀಸ್ ಫರ್‌ಫಾರ್ಮಿಂಗ್ ಆರ್ಟ್ಸ್ ನೃತ್ಯೋಲ್ಲಾಸ ಹಾಗೂ ಬೆಂಗಳೂರು ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ 9:15ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.

ಡಿ.14ರಂದು ಸಂಜೆ 6ರಿಂದ 9ರವರೆಗೆ ಚೆನ್ನೈನ ಸ್ಟೆಕೇಟೋದ 25 ಕಲಾವಿದರಿಂದ ಸಂಗೀತ ರಸದೌತಣ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ ಬೀಳಲಿದೆ. ಡಿ.15ರಂದು ಕೃಷಿ, ಆಹಾರ, ಫಲಪುಷ್ಪ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ, ಚಿತ್ರಕಲೆ, ಕಲಾಕೃತಿ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮೇಳ ದಿನಪೂರ್ತಿ ತೆರೆದಿರುತ್ತದೆ. ಪ್ರತಿನಿತ್ಯ ಅಂದಾಜು ತಲಾ 1 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಡಾ.ಎಂ.ಮೋಹನ್ ಆಳ್ವ ತಿಳಿಸಿದರು.

ಇಂಡಿಯನ್ ಆರ್ಟಿಸಾನ್ ಬಝಾರ್

ಈ ಹಿಂದಿನಂತೆಯೇ ಈ ಬಾರಿಯ ವಿರಾಸತ್ ನಲ್ಲೂ ಕೃಷಿ, ಆಹಾರ, ಫಲಪುಷ್ಪ ಸೇರಿದಂತೆ ವಿವಿಧ ಮೇಳಗಳು ಇರಲಿವೆ. ಕಲೆ ಮತ್ತು ಕರಕುಶಲ ವಸ್ತುಗಳು, ಉಡುಪುಗಳು, ಆಭರಣಗಳು, ಗೃಹಾಲಂಕಾರಿಕ ವಸ್ತುಗಳು, ಅಪರೂಪದ ಹಾಗೂ ಸಮಕಾಲೀನ ವಸ್ತುಗಳ ಬಜಾರ್ ಈ ಬಾರಿಯ ವಿರಾಸತ್ ನಲ್ಲಿರಲಿದೆ. ದೇಶದ ವಿವಿಧ ಭಾಗದಲ್ಲಿ ತಯಾರಾದ ವೈವಿಧ್ಯಮಯ ಕರಕುಶಲ ವಸ್ತುಗಳು, ಆಯಾ ರಾಜ್ಯಗಳ ಕರಕುಶಲ ಕರ್ಮಿಗಳಿಂದ ನೇರ ಮಾರಾಟ ನಡೆಯಲಿದೆ. ಬೆಂಗಳೂರು ಆರ್ಟ್ಸ್ ಮತ್ತು ಕ್ರಾಫ್ಟ್ ಮೇಳ ಹಾಗೂ ದಿಲ್ಲಿಯ ಮೀನಾ ಬಝಾರ್ ಮೇಳಗಳಂತೆ ನಡೆಯಲಿದೆ ಎಂದು ಡಾ.ಮೋಹನ್ ಆಳ್ವ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

3 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

11 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

22 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

34 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

41 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

46 minutes ago