ಮೂಡುಬಿದಿರೆ, : “ನಾನು ಮತ್ತು ಅಭಯಚಂದ್ರ ಜೈನ್ ಅವರು ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ” ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಮೂಡುಬಿದಿರೆ ಕಂಬಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈ ಹಿಂದೆ ಅಭಯಚಂದ್ರ ಜೈನ್ ಅವರು ಕಂಬಳವನ್ನು 10-15 ವರ್ಷ ಚೆನ್ನಾಗಿ ನಡೆಸಿಕೊಡುತ್ತಿದ್ದಿರಿ. ಅಭಯಚಂದ್ರ ಜೈನ್ ಹಾಗೂ ಭಾಸ್ಕರ್ ಕೋಟ್ಯಾನ್ ಅವರ ಶ್ರಮದಿಂದ ಮೂಡುಬಿದಿರೆ ಕ್ಷೇತ್ರದಲ್ಲಿ ಕಂಬಳ ಆರಂಭವಾಗಿದೆ. 10 ಎಕರೆ ಜಾಗವನ್ನು ಕಂಬಳ ಸಮಿತಿಗೆ ನೀಡಿದ್ದಾರೆ ಅವರಿಗೆ ನನ್ನ ಅಭಿನಂದನೆಗಳು. ನಾವೆಲ್ಲರೂ ಜೊತೆಯಾಗಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳೋಣ. ನಾನು ಮತ್ತು ಅಭಯಚಂದ್ರ ಅವರು ಕೋಟಿ ಚೆನ್ನಯರಾಗಿ ಕೆಲಸ ಮಾಡುತ್ತೇವೆ. ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ ಉಳಿದ ಸಮಯ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುವ” ಎಂದರು.
ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ಪುನರಾರಂಭ -Vishwanews24
ಬಳಿಕ ಮಾತನಾಡಿದ ಅಭಯಚಂದ್ರ ಜೈನ್, “ನಾವು ಬೇರೆ ಬೇರೆ ಕಾರ್ಯಕ್ರಮಗಳಿಗೆ ಜನರನ್ನು ಸೇರಿಸಲಾಗದೇ ಟೆಂಪೋದಲ್ಲಿ ಜನರನ್ನು ಕರೆದುಕೊಂಡು ಬರಬೇಕಾಗುತ್ತದೆ. ಆದರೆ, ಈ ಕಂಬಳಕ್ಕೆ ಅವರಾಗಿಯೇ ಬರುವ ಜನ ಸಮೂಹ ಇದು ತುಳುನಾಡಿನ ಒಂದು ವೈಶಿಷ್ಟ್ಯ. ಉಮನಾಥ್ ಕೋಟ್ಯಾನ್ ಅವರು ಬಹಳ ಒಳ್ಳೆಯ ರೀತಿಯಲ್ಲಿ ಕಂಬಳಕ್ಕೆ ಪೋತ್ಸಾಹ ನೀಡುತ್ತಾ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ ಕಂಬಳ ಇಡೀ ದೇಶದಲ್ಲಿ ಯಶಸ್ವಿ ಕಂಬಳ ಎಂಬುದನ್ನು ನಾವು ತೋರಿಸಿಕೊಡುವಂತಾಗಲಿ” ಎಂದು ತಿಳಿಸಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24
“ಕಂಬಳ ನಿಲ್ಲುವಂತ ಸಂದರ್ಭದಲ್ಲಿ ಕೂಡಾ ಮೂಡುಬಿದಿರೆಯಲ್ಲಿ ಒಂದು ದೊಡ್ಡ ಹೋರಾಟವನ್ನು ಮಾಡಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಕಂಬಳ ನಡೆಯಲೇಬೇಕು, ಇದು ಜಾನಪದ ಕ್ರೀಡೆ ಎಂದು ತೋರಿಸಿಕೊಡುವಂತ ಕೆಲಸ ಮೂಡುಬಿದಿರೆಯ ಜನತೆ, ಕೋಟಿ-ಚೆನ್ನಯ ಕಂಬಳ ಸಮಿತಿ ಮಾಡಿ ತೋರಿಸಿದೆ” ಎಂದು ಹೇಳಿದರು..
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…