ಮೂಡುಬಿದಿರೆ: ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಗೋಪಿ (68) ಮೃತಪಟ್ಟ ಮಹಿಳೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಗೋಪಿ ಅವರು ಗಾಯಗೊಂಡಿದ್ದರು. ಮನೆಯಲ್ಲಿದ್ದ ಅವರ ಮಕ್ಕಳೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿದ್ದ ಗೋಪಿ ಅವರನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷ ಜಯಂತ ಹೆಗ್ಡೆ ಸಹಿತ ಕೆಲವರು ಹೊಸ್ಮಾರಿನ ಕ್ಲಿನಿಕ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಿ ಅವರು ಐದು ಮಂದಿ ಗಂಡು ಮಕ್ಕಳನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಭೇಟಿ ನೀಡಿದ್ದಾರೆ
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…