ಮೂಡುಬಿದಿರೆ: ಮಂಗಳೂರಿನ ಮೂಡಬಿದ್ರೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಧರ್ಮಿಯ ವಿದ್ಯಾರ್ಥಿ ಮೇಲೆ ಗುಂವೊಂದು ಹಲ್ಲೆ ಮಾಡಿದೆ. ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ನಡೆದಿದ್ದ ಘಟನೆ ನಡೆದಿದ್ದು, ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…