ಮೂಡುಬಿದಿರೆ: ಮಂಗಳೂರಿನ ಮೂಡಬಿದ್ರೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಧರ್ಮಿಯ ವಿದ್ಯಾರ್ಥಿ ಮೇಲೆ ಗುಂವೊಂದು ಹಲ್ಲೆ ಮಾಡಿದೆ. ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ನಡೆದಿದ್ದ ಘಟನೆ ನಡೆದಿದ್ದು, ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…