ಮೂಡುಬಿದಿರೆ : ಮೂಡುಬಿದಿರೆಯ ಶಿರ್ತಾಡಿಯ ಮನೆಯೊಂದರ ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಾಲ್ಪಾಡಿ ಗ್ರಾಮದ ಪವನ್ ಕುಮಾರ್, ಪುರಸಭೆ ವ್ಯಾಪ್ತಿಯ ಮಾರೂರಿನ ಸತೀಶ್ ಹಾಗೂ ಜಯಾನಂದ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಆರೋಪಿ ಗಿರೀಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರಿನ ಗಣೇಶ್ ಎಂಬವರ ಮನೆಯ ತೋಟದಲ್ಲಿ ಮೂರು ದಿನಗಳ ಹಿಂದೆ ಮೇಯಲು ಕಟ್ಟಿದ್ದ ದನ ಕಳವಾಗಿತ್ತು. ಶನಿವಾರ ಅದೇ ದನವನ್ನು ಈ ನಾಲ್ವರು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ ಟೆಂಪೊದಲ್ಲಿ ಕೊಂಡೊಯ್ಯುತ್ತಿರುವುದನ್ನು ಸ್ಥಳೀಯುರು ಗಮನಿಸಿದ್ದು, ಶಿರ್ತಾಡಿ ಸೇತುವೆಯ ಬಳಿ ಟೆಂಪೋವನ್ನು ತಡೆದು ನಿಲ್ಲಿಸಿದ ಸಾರ್ವಜನಿಕರು ವಿಚಾರಿಸಿದಾಗ ಆರೋಪಿಗಳು ಸುಳ್ಳು ಮಾಹಿತಿ ನೀಡಿದ್ದಾರೆ.
ಇನ್ನು ಈ ವೇಳೆ ಅಳಿಯೂರಿನ ಗಣೇಶ್ ಸ್ಥಳಕ್ಕಾಗಮಿಸಿ ಅದು ತಮ್ಮ ಮನೆಯ ಹಸುವೆಂದು ಖಚಿತಪಡಿಸಿದ್ದು, ಬಳಿಕ ಸಾರ್ವಜನಿಕರು ಆರೋಪಿಗಳ ಪೈಕಿ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…